janadhvani

Kannada Online News Paper

ಕಾಣಿಕೆ ಡಬ್ಬಿಗೆ ಅವಹೇಳನೆ: ಶಾಂತಿ ಕದಡಲು ಯತ್ನಿಸಿಸುವವರನ್ನು ಬಂಧಿಸಿ- ಯು.ಟಿ ಖಾದರ್

ಮಂಗಳೂರು:ಇಲ್ಲಿನ ನಗರ ಸೇರಿದಂತೆ ನಾನಾ ಕಡೆ ದೈವಸ್ಥಾನದ ಕಾಣಿಕೆ ಡಬ್ಬಿಯಲ್ಲಿ ಅವಹೇಳನಕಾರಿ ಬರಹ ಹಾಗೂ ಇನ್ನಿತರ ಸೊತ್ತುಗಳು ಕಂಡು ಬಂದಿದ್ದು, ಧಾರ್ಮಿಕ ಭಾವನೆಗೆ ಧಕ್ಕೆ ತರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಮಂಗಳೂರು ಶಾಸಕ ಯು.ಟಿ. ಖಾದರ್‌ ಆಗ್ರಹಿಸಿದ್ದಾರೆ.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಣಿಕೆ ಡಬ್ಬಿಯಲ್ಲಿಅವಹೇಳನ ವಿಚಾರಕ್ಕೆ ಸಂಬಂಧಿಸಿ ಈಗಾಗಲೇ ಕಮಿಷನರ್‌ ಅವರನ್ನು ಭೇಟಿಯಾಗಿ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದೇನೆ. ಈ ರೀತಿಯ ಘಟನೆಗಳ ಮೂಲಕ ತಂಡವೊಂದು ಸಾಮಾಜಿಕ ಶಾಂತಿ ಕದಡಲು ಪ್ರಯತ್ನಿಸಿರುವುದು ಸ್ಪಷ್ಟವಾಗಿದೆ. ಇಂತಹ ಘಟನೆ ಮರುಕಳಿಸದಂತೆ ಪ್ರಕರಣದ ಆರೋಪಿಗಳನ್ನು ಬಂಧಿಸಬೇಕಿರುವುದು ರಾಜ್ಯ ಸರಕಾರದ ಜವಾಬ್ದಾರಿಯಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್‌ ಮುಖಂಡರಾದ ಸದಾಶಿವ ಉಳ್ಳಾಲ್‌, ಟಿ.ಕೆ. ಸುಧೀರ್‌, ಸುಭೋದಯ ಆಳ್ವ, ಮುರಳೀಧರ್‌ ರೈ, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸವಾದ್‌ ಸುಳ್ಯ ಉಪಸ್ಥಿತರಿದ್ದರು.

error: Content is protected !! Not allowed copy content from janadhvani.com