janadhvani

Kannada Online News Paper

ಮಠ ಬ್ರಾಂಚ್ ಎಸ್‌ಡಿಪಿಐ: ಕುಡಿಯುವ ನೀರಿನ ಟ್ಯಾಂಕ್ ಸ್ವಚ್ಛತೆ

ಉಪ್ಪಿನಂಗಡಿಯ 6ನೇ ವಾರ್ಡ್ ಮಠದ ಹಿರ್ತಡ್ಕ ಎಂಬಲ್ಲಿ ಕುಡಿಯುವ ನೀರಿನ ಟ್ಯಾಂಕಿಯಲ್ಲಿ ನೀರು ಕಲುಷಿತವಾಗಿದೆ ಎಂಬ ದೂರು ಕೇಳಿ ಬಂದಾಗ ನೂತನ ಪಂಚಾಯತ್ ಸದಸ್ಯ ರಶೀದ್ ಮಠ ರವರ ನೇತ್ರತ್ವದಲ್ಲಿ ಮೂರು ದಿನಗಳ ಹಿಂದೆ ಪರಿಶೀಲನೆ ನಡೆಸಿ ಸ್ವಚ್ಛಗೊಳಿಸುವುದಾಗಿ ಊರವರಿಗೆ ಭರವಸೆ ಕೂಟ್ಟಿದ್ದು, ವಾರದೊಳಗೆ ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಸೇರಿ ನೀರಿನ ಟ್ಯಾಂಕನ್ನು ತೊಳೆದು ಸ್ವಚ್ಛಗೊಳಿಸಿ ನೀಡಿದ ಭರವಸೆಯನ್ನು ಪೂರೈಸಿದ್ದಾರೆ.

ಸ್ವಚ್ಛಗೊಳಿಸುವ ಸಂಧರ್ಭದಲ್ಲಿ ಟ್ಯಾಂಕಿಯಲ್ಲಿರುವ ಕೆಸರು, ಕಸ ಕಡ್ಡಿಗಳು ಮತ್ತು ಹಲ್ಲಿಗಳನ್ನು ಕಂಡು ದಂಗಾದರು. ಈ ನೀರನ್ನೇ ಕುಡಿಯಲು ಬಳಸುತ್ತಿದ್ದ ಊರವರ ಆರೋಗ್ಯದ ಬಗ್ಗೆ ಮತ್ತು ವರ್ಷಗಳ ಕಾಲ ಆಡಳಿತ ನಡೆಸಿ ಇಂತಹ ಮೂಲಭೂತ ಸೌಕರ್ಯಗಳ ಸಮಸ್ಯೆಯನ್ನು ಪರಿಹರಿಸದ ಆಡಳಿತ ವ್ಯವಸ್ಥೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಈ ಸಂಧರ್ಭ ಎಸ್‌ಡಿಪಿಐ ಬೆಂಬಲಿತ ನೂತನ ಪಂಚಾಯತ್ ಸದಸ್ಯರಾದ ನೆಬಿಸ ಇಲ್ಯಾಸ್ ಮತ್ತು ಸೌಧ ಮುಸ್ತಫಾರವರು ಕೂಡ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಎಸ್‌ಡಿಪಿಐ ಪಕ್ಷದ ಮತ್ತು ನೂತನ ಪಂಚಾಯತ್ ಸದಸ್ಯರ ಈ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

error: Content is protected !! Not allowed copy content from janadhvani.com