ಬಳ್ಳಾರಿ: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಬಳ್ಳಾರಿ ಜಿಲ್ಲಾ ವತಿಯಿಂದ ಧ್ವಜಾರೋಹಣ ಸಮಾರಂಭವನ್ನು ಹೊಳಗುಂದ ರೈತರು ನೆರವೇರಿಸಿದರು. ಗಣರಾಜ್ಯೋತ್ಸವವನ್ನು ಹೊಳಗುಂದ ಗ್ರಾಮದ ರೈತನ ಹೊಲದಲ್ಲಿ ಎಸ್ಸೆಸ್ಸೆಫ್ ಬಳ್ಳಾರಿ ಜಿಲ್ಲಾ ವತಿಯಿಂದ ಹಮ್ಮಿ ಕೊಳ್ಳಲಾಗಿತ್ತು.

ಎಸ್ಸೆಸ್ಸೆಫ್ ಬಳ್ಳಾರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಹಾಖ್ ಸಖಾಫಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರತಿವರ್ಷ ಆಚರಿಸುವ ಗಣರಾಜ್ಯೋತ್ಸವ ಏಕೆ ಈ ವರ್ಷ ವಿಶೇಷವಾಗಿ ಹೊಲದಲ್ಲಿ ಆಚರಿಸುವ ಕಾರಣ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಂಬಲಿಸಿ ರೈತರಿಗೆ ನ್ಯಾಯ ಸಿಗಬೇಕು ಎಂಬ ಉದ್ದೇಶದೊಂದಿಗೆ ಆಚರಿಸಲಾಯಿತು. ಸಿಯಾರುದ್ದೀನ್ ಹಿಮಮಿ ಎಲ್ಲರಿಗೂ ವಂದನೆಗಳನ್ನು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಹಿರಿಯ ರೈತರಾದ ಕೆ.ಪೀರ್ ಸಾಬ್,ಎಂ.ಪಿ.ಹುಸೈನ್ ಪೀರ್, ಚಿನ್ನಗಿಸಾಬ್, ಸಾಬೇಶ್,ಎಸ್ಸೆಸ್ಸೆಫ್ ಪ್ರಧಾನ ಕಾರ್ಯದರ್ಶಿ ಇಸ್ಹಾಖ್ ಸಖಾಫಿ ಕುಡತಿನಿ, ಜೊತೆ ಕಾರ್ಯದರ್ಶಿ ಶಿಯಾರುದ್ದೀನ್ ಹಿಮಮಿ ಹೊಳಗುಂದ, ಪೀರಾಸಾಬ್ ಬೂದುಗುಪ್ಪ, ಇತರರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ