ಧಾರ್ಮಿಕ ಶಿಕ್ಷಣ ಕಲಿತ ಹೆಣ್ಣಿನಿಂದ ಮಾತ್ರ ಮನೆ ಮತ್ತು ಮನವನ್ನು ಬೆಳಗಲು ಸಾಧ್ಯ, ಅದಕ್ಕಾಗಿ ಶಾಲಾ ಕಾಲೇಜುಗಳಲ್ಲಿ ಸಾಮಾನ್ಯ ವಿದ್ಯಾಭ್ಯಾಸದ ಜೊತೆಗೆ ಧಾರ್ಮಿಕ & ನೈತಿಕ ಶಿಕ್ಷಣವನ್ನು ಕೂಡಾ ಅಳವಡಿಸಿ ಕೊಳ್ಳಬೇಕೆಂದು ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಅಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ತಂಙಳ್ ಮದನಿ ಉಜಿರೆ ಕರೆ ನೀಡಿದರು.
ಅವರು ಕುಂಬ್ರ ಮರ್ಕಝ್ ಇಪ್ಪತ್ತನೆಯ ವಾರ್ಷಿಕದ ಅಂಗವಾಗಿ ನಡೆದ ಹಳೆ ವಿದ್ಯಾರ್ಥಿನಿಯರ ಸಮಾವೇಶದಲ್ಲಿ (ಅಲುಂನಿ ಅಸೆಂಬ್ಲಿ) ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ನೈತಿಕ ಪ್ರಜ್ಞೆ ಮತ್ತು ಧಾರ್ಮಿಕತೆ ಎಲ್ಲಾ ಕ್ಷೇತ್ರಗಳಿಂದಲೂ ಮರೆಯಾಗುತ್ತಿರುವ ಇಂದಿನ ಸನ್ನಿವೇಶದಲ್ಲಿ ವಿಶೇಷವಾಗಿ ಹೆಣ್ಮಕ್ಕಳನ್ನು ನೈತಿಕತೆಯ ಹಾದಿಯಲ್ಲಿ ಮುನ್ನಡೆಸಲು ಮರ್ಕಝ್ನಂತಹ ಸಂಸ್ಥೆಗಳು ಕಾಲಘಟ್ಟದ ಬೇಡಿಕೆಯೆಂದು ಅವರು ಅಭಿಪ್ರಾಯ ಪಟ್ಟರು
ಶರೀಅತ್ ಕಾಲೇಜಿನ ಪ್ರಿನ್ಸಿಪಾಲ್ ಯು.ಕೆ.ಮುಹಮ್ಮದ್ ಸಅದಿ ವಳವೂರು ಉಧ್ಘಾಟಿಸಿದರು. ಪ್ರಧಾನ ಕಾರ್ಯದರ್ಶಿ ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್ ಅಲುಂನಿ ಸಂದೇಶ ನೀಡಿದರು. ಪ್ರಖ್ಯಾತ ತರಬೇತುದಾರ ಶಹೀರ್ ಅಹ್ಮದ್ ಫಾಝಿಲ್ ಪ್ರೇರಣಾ ಭಾಷಣ ಮಾಡಿದರು.
ಪದವಿ ಕಾಲೇಜ್ ಪ್ರಾಂಶುಪಾಲ ಮನ್ಸೂರ್ ಕಡಬ, ಪಿಯು ಕಾಲೇಜ್ ಪ್ರಾಂಶುಪಾಲೆ ಸಂಧ್ಯಾ ಪಿ.ಶೆಟ್ಟಿ, ಶುಭ ಹಾರೈಸಿದರು. ಕಾರ್ಯಾಧ್ಯಕ್ಷ ಹಾಜಿ ಪಿ.ಎಂ.ಅಬ್ದುಲ್ ರಹ್ಮಾನ್ ಅರಿಯಡ್ಕ ಸ್ವಾಗತಿಸಿ, ಸ್ವಾಗತ ಸಮಿತಿ ಪ್ರಧಾನ ಸಂಚಾಲಕ ಹಾಜಿ ಕರೀಂ ಚೆನ್ನಾರ್ ಧನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ನಾಳೆಯಿಂದ ಎಸ್ಸೆಸ್ಸೆಫ್ ಕ್ಯಾಂಪಸ್ ಕಾನ್ಫರೆನ್ಸ್ – ಎಲ್ಲರ ಚಿತ್ತ ಮೈಸೂರಿನತ್ತ!
ನಂದಾವರ ಕೋಟೆ: ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಬಾಮಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ 100% ಫಲಿತಾಂಶ
ಶಾಜ್ಮಿಯ ಡಿಸ್ಟಿಂಕ್ಷನ್ (557) ಅಂಕದೊಂದಿಗೆ ತೇರ್ಗಡೆ
ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶೇ. 73.40 ವಿದ್ಯಾರ್ಥಿಗಳು ಉತ್ತೀರ್ಣ- ಬಾಲಕಿಯರೇ ಮೇಲುಗೈ
ದ್ವಿತೀಯ ಪಿಯುಸಿ ಫಲಿತಾಂಶ: 542 ಅಂಕಗಳಿಸಿ ಕಳಂಜಿಬೈಲ್ ಗೆ ಕೀರ್ತಿ ತಂದ ಶಝ್ಮಿಯಾ
ಪಿಯುಸಿ ಕೆಜಿಎನ್ ಶೀ ಕ್ಯಾಂಪಸ್ ಗೆ 100%
ಕಾವೂರು BGS ಫ್ರೌಡಶಾಲೆಯ ವಿದ್ಯಾರ್ಥಿನಿ ಮರಿಯಮ್ ಸಲ್ವಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ
ಕೃಷ್ಣಾಪುರದ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಸುಝಐಫಾ ಫರಹಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ
ಬಾಮಿ ಆಂಗ್ಲ ಮಾಧ್ಯಮ ಶಾಲೆಗೆ 100% ಫಲಿತಾಂಶ