ಸೌದಿ ಅರೇಬಿಯಾ: ಜುಬೈಲ್ ನ ಪ್ರತಿಷ್ಠಿತ ಕಂಪನಿ ಯುನೈಟೆಡ್’ಟೆಕ್ ನಲ್ಲಿ ಉತ್ತಮ ಹುದ್ದೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಂಗಳೂರು ಬೆಂಜನಪದವು ನಿವಾಸಿ ಇಸ್ಮಾಯಿಲ್ ಅಬ್ದುಲ್ ಹಮೀದ್ (ಹನೀಫ್) ಎಂಬುವವರು ಜನವರಿ 30 ರಂದು ಅನಾರೋಗ್ಯದಿಂದ ಮರಣಹೊಂದಿರುತ್ತಾರೆ. ಉತ್ತಮ ಗುಣ ನಡತೆಯ ವ್ಯಕ್ತಿತ್ವ ಹೊಂದಿದ್ದ ಇವರು ಸಾಂತ್ವನ ಹಾಗೂ ಹಲವಾರು ಸಂಘಸಂಸ್ಥೆ ಸ್ಥಾಪನೆಗಳಿಗೆ ಸಹಾಯಸ್ತ ನೀಡುತ್ತಿದ್ದ ಕೊಡುಗೈ ದಾನಿಯಾಗಿದ್ದರು. ಮೃತರು ತಾಯಿ, ಹೆಂಡತಿ ಹಾಗೂ ನಾಲ್ಕು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಮರಣೋತ್ತರ ಕ್ರಿಯೆಗೆ ಬೇಕಾದ ವ್ಯವಸ್ಥೆ ಕಲ್ಪಿಸಲು ಕೂಡಲೆ ಸ್ಪಂದಿಸಿ ಕಾರ್ಯ ಪ್ರವರ್ತರಾದ ಕೆ.ಸಿ.ಎಫ್ ಜುಬೈಲ್ ಹಾಗು ದಮ್ಮಾಮ್ ಝೋನ್ ಸಾಂತ್ವನ ತಂಡವು ಭಾರತೀಯ ರಾಯಬಾರಿ ಕಛೇರಿ ಹಾಗೂ ಊರಿನಿಂದ ಬೇಕಾದ ದಾಖಲೆ ಪತ್ರವನ್ನು ತ್ವರಿತ ವೇಗದಲ್ಲಿ ಸರಿಪಡಿಸಿ ಕೇವಲ 1 ದಿವಸದೊಳಗಾಗಿ ಜನವರಿ 31ರಂದು ಮಗ್ರಿಬ್ ನಮಾಜಿನ ಬಳಿಕ ಜುಬೈಲ್ ನಲ್ಲಿ ದಫನ ಕಾರ್ಯ ನಿರ್ವಹಿಸಲಾಯಿತು.
ಈ ಒಂದು ಉತ್ತಮ ಕಾರ್ಯದಲ್ಲಿ ಕೆ.ಸಿ.ಎಫ್ ನೊಂದಿಗೆ ಸಹಕರಿಸಿದ ಝೋನ್ ಸಾಂತ್ವನ ಕನ್ವೀನರ್ ಬಾಷಾ ಗಂಗಾವಳಿ, ಜುಬೈಲ್ ಸಾಂತ್ವನ ನಾಯಕರಾದ ನೌಫಲ್ ಮುಲ್ಕಿ, ಸಫ್ವಾನ್ ಮುಕ್ಕ, ಮತ್ತು ಸಾಮಾಜಿಕ ಕಾರ್ಯಕರ್ತ ಇಬ್ರಾಹಿಂ (ಇಬ್ಬ) ಬಜ್ಪೆ ಹಾಗೂ ಯುನೈಡೆಟ್ ಅಬ್ದುರ್ರಹ್ಮಾನ್ ಬಜ್ಪೆ ಇವರುಗಳಿಗೆ ಅಭಿನಂದನೆ ಸಲ್ಲಿಸುತ್ತಿದ್ದೇವೆ.
ಕೆ.ಸಿ.ಎಫ್ ಜುಬೈಲ್ ಶೋಲ ಸೆಕ್ಟರ್ ಅಧ್ಯಕ್ಷರಾದ ಅಬೂಬಕರ್ ಮದನಿ ಹಾಗೂ ಹಲವು ನಾಯಕರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಮೃತರಿಗಾಗಿ ದುಆ ನೆರೆವೇರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ