ಬೆಂಗಳೂರು: ಕೊರೋನಾ ಪ್ರಕರಣಗಳು ಹೆಚ್ಚಳವಾಗದಂತೆ ಎಚ್ಚರಿಕೆ ವಹಿಸುತ್ತಿರುವ ಬಿಬಿಎಂಪಿ ಕೇರಳದಿಂದ ನಗರಕ್ಕೆ ಬರುವವರಿಗೆ ಕೋವಿಡ್-19 ನೆಗೆಟೀವ್ ವರದಿಯನ್ನು ಕಡ್ಡಾಯಗೊಳಿಸಿದೆ.
ಬಿಬಿಎಂಪಿ ಆಯುಕ್ತ ಎನ್ ಮಂಜುನಾಥ್ ಪ್ರಸಾದ್ ಈ ಬಗ್ಗೆ ಮಾಹಿತಿ ನೀಡಿದ್ದು ಕೋವಿಡ್-19 ನೆಗೆಟೀವ್ ವರದಿ ಇಲ್ಲದೇ ಬೆಂಗಳೂರಿಗೆ ಬರುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಇದೇ ವೇಳೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಬಿಬಿಎಂಪಿ ಮಾರ್ಷಲ್ ಗಳಿಗೆ ಸೂಚನೆ ನೀಡಲಾಗಿದ್ದು ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಷನ್ ಗಳೊಂದಿಗೆ ನಿಕಟವಾಗಿ ಕೆಲಸ ಮಾಡುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಇದೇ ವೇಳೆ ಕೋವಿಡ್-19 ಪ್ರಕರಣಗಳ ಮೇಲೆ ವಿಶೇಷವಾಗಿ ಗಮನ ಹರಿಸಿ, ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ತಿಳಿಸುವುದಕ್ಕೆ ಆರ್ ಡಬ್ಲ್ಯುಎ ಗಳಿಗೆ ಸೂಚನೆ ನೀಡಲಾಗಿದೆ.
ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ಹಾಗೂ ವಿಶೇಷ ಆಯುಕ್ತರ ಜೊತೆ ಸಭೆ ಬಳಿಕ ಆಯುಕ್ತರು ಮಾಧ್ಯಮಗಳಿಗೆ ಈ ಮಾಹಿತಿ ನೀಡಿದ್ದಾರೆ. ಮಂಜುಶ್ರೀ ಕಾಲೇಜಿನ 40 ವಿದ್ಯಾರ್ಥಿಗಳು, ಬೊಮ್ಮನಹಳ್ಳಿ ಝೋನ್ ನ ಅಪಾರ್ಟ್ ಮೆಂಟ್ ಕಾಂಪ್ಲೆಕ್ಸ್ ನಲ್ಲಿ 56 ಮಂದಿಗೆ ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ಈ ಸಭೆ ನಡೆದಿದೆ.
















ಇನ್ನಷ್ಟು ಸುದ್ದಿಗಳು
ಎಸ್ಸೆಸ್ಸೆಫ್ ಸೌಹಾರ್ದ ನಡಿಗೆ ಸಮಾರೋಪ ಸಮಾರಂಭ ಬೆಂಗಳೂರಿನಲ್ಲಿ
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಎಸ್ ಎಸ್ ಎಫ್ ಜಯನಗರ ಡಿವಿಷನ್ ಗೆ ನವ ಸಾರಥ್ಯ
ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಸಾಹಿತ್ಯೋತ್ಸವದ ಪಾತ್ರ ಅಪಾರ-ಅನಸ್ ಸಿದ್ದೀಖಿ
SSF ಮೆಜೆಸ್ಟಿಕ್ ಡಿವಿಷನ್ ಮಟ್ಟದ ಸಾಹಿತ್ಯೋತ್ಸವ ಪ್ರೌಢ ಸಮಾಪ್ತಿ
ಎಸ್ ಎಸ್ ಎಫ್ ಜಯನಗರ ಡಿವಿಷನ್ ಸಾಹಿತ್ಯೋತ್ಸವ: ಯಾರಬ್ ನಗರ ಶಾಖೆ ಪ್ರಥಮ
ಬೆಂಗಳೂರು ಸಂಯುಕ್ತ ಜಮಾಅತ್ ಖಾಝಿಯಾಗಿ ಇಂಡಿಯನ್ ಗ್ರಾಂಡ್ ಮುಫ್ತಿ ಎ.ಪಿ.ಉಸ್ತಾದ್
ಕಾರ್ಯಕರ್ತರು ಸೇವಾ ಮನೋಭಾವದೊಂದಿಗೆ ಕಾರ್ಯಚರಿಸಬೇಕು-ಅನಸ್ ಅಮಾನಿ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ತೊಂಬತ್ತಲ್ಲ ಮೂವತ್ತು ದಿನಗಳಲ್ಲಿ ಶಿಕ್ಷೆ ನೀಡುವ ನ್ಯಾಯವ್ಯವಸ್ಥೆಯು ಜಾರಿಗೆ ಬರಲಿ :ಕರ್ನಾಟಕ ಮುಸ್ಲಿಂ ಜಮಾತ್