ಮಂಗಳೂರು:ಕರ್ನಾಟಕ ರಾಜ್ಯ ಸುನ್ನೀ ಜಂಇಯ್ಯತುಲ್ ಉಲಮಾ ಮಂಗಳೂರು ಝೋನ್ ದ್ವೈವಾರ್ಷಿಕ ಮಹಾಸಭೆಯು ಕಂಕನಾಡಿ ಮದ್ರಸ ಹಾಲ್ ನಲ್ಲಿ ಇಂದು ಝೋನ್ ಅಧ್ಯಕ್ಷ ಬಶೀರ್ ಮದನಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ರಾಜ್ಯಾಧ್ಯಕ್ಷ ಆತೂರು ಸಅದ್ ಮುಸ್ಲಿಯಾರ್ ಉದ್ಘಾಟಿಸಿದರು. ರಾಜ್ಯ ಜಂಇಯ್ಯತುಲ್ ಉಲಮಾ ಮುಖಂಡರಾದ
ಡಿ.ಕೆ ಉಮರ್ ಸಖಾಫಿ ಕಂಬಳಬೆಟ್ಟು ತರಗತಿ ನಡೆಸಿಕೊಟ್ಟರು. ಕಂಕನಾಡಿ ಮಸೀದಿ ಖತೀಬರಾದ ಅಬ್ದುಲ್ ರಹಿಮಾನ್ ಸಅದಿ, ಶುಭಾಶಯಗಳನ್ನು ಕೋರಿದರು. ಎಸ್ ಜೆ ಎಂ ಜೆಪ್ಪು ರೇಂಜ್ ಅಧ್ಯಕ್ಷ ಸತ್ತಾರ್ ಸಖಾಫಿ,ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಮುಸ್ಲಿಯಾರ್ ಬಜಾಲ್ ನಂತೂರು,ಮಂಗಳೂರು ರೇಂಜ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್ ಸಅದಿ ವಾಮಂಜೂರು ಅಬೂಬಕ್ಕರ್ ಮದನಿ ಅಜ್ಮಾನ್ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ 2021-2023ನೇ ಸಾಲಿನ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಬಶೀರ್ ಮದನಿ ಅಲ್ ಕಾಮಿಲ್ ಕೂಳೂರು, ಪ್ರಧಾನ ಕಾರ್ಯದರ್ಶಿಯಾಗಿ ಹಾಫಿಳ್ ಯಾಕೂಬ್ ಸಅದಿ ನಾವೂರು ಕೋಶಾಧಿಕಾರಿಯಾಗಿ ಅಬ್ದುಲ್ ಸತ್ತಾರ್ ಸಖಾಫಿ ಅಡ್ಯಾರ್ ಪದವು ಉಪಾಧ್ಯಕ್ಷರುಗಳಾಗಿ ಅಬ್ದುಲ್ ರಹಿಮಾನ್ ಸಅದಿ ಕಂಕನಾಡಿ ಮತ್ತು ಇಸ್ಮಾಯಿಲ್ ಬುಖಾರಿ ಮದನಿ ಮಂಚಿ ಜೊತೆ ಕಾರ್ಯದರ್ಶಿ ಗಳಾಗಿ ಅಬೂಬಕ್ಕರ್ ಮುಸ್ಲಿಯಾರ್ ಕುಕ್ಕಾಜೆ ಮತ್ತು ಅಬ್ದುಲ್ ಖಾದರ್ ಸಅದಿ ಬೋಂದೆಲ್ ಇವರನ್ನು ಆಯ್ಕೆ ಮಾಡಲಾಯಿತು. ಸಮಿತಿ ಸದಸ್ಯರುಗಳಾಗಿ ಮಹಮ್ಮದ್ ಮದನಿ ಜೆಪ್ಪು ಉಸ್ತಾದ್,ಆತೂರು ಸಅದ್ ಮುಸ್ಲಿಯಾರ್,ಅಕ್ಬರ್ ಮದನಿ ಬಜಾಲ್,ಇಸಾಕ್ ಸಖಾಫಿ ಮರಕಡ,ಶರೀಫ್ ಮುಸ್ಲಿಯಾರ್ ಗುಡ್ಡೆ ಅಂಗಡಿ,ಕಲಂದರ್ ಶಾಫಿ ಮದನಿ,ಅಬೂಬಕ್ಕರ್ ಮದನಿ ಆತೂರು,ತಾಜುದ್ದೀನ್ ಸಖಾಫಿ ಬೀರ್ಪುಗುಡ್ಡೆ,ಸಿರಾಜುದ್ದೀನ್ ನಿಝಾಮಿ ಕೂಳೂರು,ಝುಬೈರ್ ಮುಸ್ಲಿಯಾರ್ ಇವರನ್ನು ಆಯ್ಕೆ ಮಾಡಲಾಯಿತು.
ಹಾಫಿಳ್ ಯಾಕೂಬ್ ಸಅದಿ ನಾವೂರು ಸ್ವಾಗತಿಸಿ ಸತ್ತಾರ್ ಸಖಾಫಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ