ಮಂಗಳೂರು, ಫೆ.25: ಇಂದು ಅಪರಾಹ್ನ ಮಂಗಳೂರು ಬೋಂದೆಲ್ನಲ್ಲಿರುವ ತನ್ನ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ರಾಜ್ಯಾಧ್ಯಕ್ಷ, ಹಾಗೂ ಕರ್ನಾಟಕದ ಮದ್ರಸಾ ರಂಗದಲ್ಲಿ ಅನೇಕ ಬದಲಾವಣೆಗಳಿಗೆ ಮುನ್ನುಡಿ ಬರೆದ ಮುಅಲ್ಲಿಂ ಚಳವಳಿಯ ಮುಂಚೂಣಿ ನಾಯಕ ಆತೂರು ಸಅದ್ ಮುಸ್ಲಿಯಾರ್ (60) ಅವರ ವಿಯೋಗವು ಮುಸ್ಲಿಂ ಸಮುದಾಯಕ್ಕೆ ತುಂಬಲಾರದ ನಷ್ಟ ಎಂದು ಎಸ್.ವೈ.ಎಸ್.ಕರ್ನಾಟಕ ರಾಜ್ಯ ಸಮಿತಿಯು ಅಭಿಪ್ರಾಯ ಪಟ್ಟಿದೆ.
ಎಲ್ಲರೊಂದಿಗೂ ನಗು ಮುಖದಿಂದ ಬೆರೆಯುವ ಸದಾ ಉತ್ಸಾಹಿಯಾಗಿದ್ದ ಸಅದ್ ಮುಸ್ಲಿಯಾರ್ ಮದ್ರಸಾ ರಂಗದಲ್ಲಿ ಜಾರಿಗೆ ತಂದ ನೂತನ ಕಾರ್ಯ ಯೋಜನೆಗಳು ಸದಾ ಸ್ಮರಣೀಯ.
ಅವರ ಹೆಸರಲ್ಲಿ ಸಂಘಟನಾ ಕುಟುಂಬದ ಎಲ್ಲ ಸದಸ್ಯರು ಖುರ್ಆನ್,ತಹ್ಲೀಲ್ ಓದಿ ಹದ್ಯಾ ಮಾಡಿ ವಿಶೇಷ ದುಆ ಹಾಗೂ ನಾಳೆ ಜುಮಾ ನಂತರ ಎಲ್ಲಾ ಮಸೀದಿಗಳಲ್ಲಿ ಜನಾಝ ನಮಾಜ್ ನಿರ್ವಹಿಸಬೇಕೆಂದು ಎಸ್.ವೈ.ಎಸ್.ರಾಜ್ಯಾಧ್ಯಕ್ಷ ಪಿ.ಎಂ.ಉಸ್ಮಾನ್ ಸಅದಿ ಪಟ್ಟೋರಿ ಹಾಗೂ ಪ್ರಧಾನ ಕಾರ್ಯದರ್ಶಿ ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್ ಅಪೇಕ್ಷಿಸಿದ್ದಾರೆ. ಸಅದ್ ಉಸ್ತಾದರು ಪತ್ನಿ, ಎರಡು ಹೆಣ್ಣು ಮಕ್ಕಳು, ಎರಡು ಗಂಡು ಮಕ್ಕಳು ಹಾಗೂ ಅಪಾರ ಬಂಧು ಬಳಗ,ಅಭಿಮಾನಿ ವೃಂದವನ್ನು ಅಗಲಿದ್ದಾರೆ
ಅವರ ಜನಾಝ ಈಗ ಬೋಂದೆಲ್ನ ಮನೆಯಲ್ಲಿದ್ದು ನಾಳೆ ಸುಬಹಿ ನಮಾಝ್ನ ಬಳಿಕ ದಫನ ಕಾರ್ಯ ನಡೆಯುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ