ರಿಯಾದ್: ಸೌದಿ ಅರೇಬಿಯಾದ ರಿಯಾದಿನಲ್ಲಿರುವ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮೂಡುಗೆರೆಯ ಕುಮಾರ್ ಎಂಬವರು ಕೆಲವು ತೊಂದರೆಗಳಿಗೆ ಸಿಲುಕಿ ಊರಿಗೂ ಹೋಗಲು ಸಾಧ್ಯವಾಗದ ಸಂದರ್ಭದಲ್ಲಿ ಕೆಸಿಎಫ್ ಸೌದಿ ಅರೇಬಿಯಾ ಅವರ ನೆರವಾಗಿ ಅವರನ್ನು ಊರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದೆ.
ಕುಮಾರ್ ರವರು ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ಕೆಲವು ತೊಂದರೆಗಳು ಆಗಿ ಕಂಪನಿಯವರು ಕುಮಾರ್ ಮೇಲೆ ದೂರು ದಾಖಲಿಸಿದ್ದರು. ಕೇಸ್ ನ್ಯಾಯಾಲಯ ತಲುಪಿ ಅದರ ತೀರ್ಪು ಕುಮಾರ್ ವಿರುದ್ದವಾಗಿ ಬಂದ ಕಾರಣ ಅವರು ಊರಿಗೂ ಹೋಗಲು ಆಗದ ಪರಿಸ್ಥಿತಿ ಎದುರಾಗಿತ್ತು.
ಈ ವಿಷಯವನ್ನು ಕುಮಾರ್ ರವರು ಕೆಸಿಎಫ್ ಜುಬೈಲ್ ಕಾರ್ಯಕರ್ತನಾದ ಮುಫೀದ್ ರವರರಿಗೆ ತಿಳಿಸಿದರು. ಕೂಡಲೇ ಮುಫೀದ್ ರವರು ಕೆಸಿಎಫ್ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿ ಸಾಂತ್ವನ ಇಲಾಖೆಯ ಅಧ್ಯಕ್ಷರಾದ ಮುಹಮ್ಮದ್ ಮಲೆಬೆಟ್ಟುರವರ ಗಮಕ್ಕೆ ತಂದರು.
ಇದನ್ನು ಗಂಭೀರತೆಯನ್ನು ಮನಗಂಡ ಮುಹಮ್ಮದ್ ಮಲೆಬೆಟ್ಟು ರವರು ಇದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿದರು.
ಕೆಸಿಎಫ್ ನೇತಾರರುಗಳಾದ ಮುಹಮ್ಮದ್ ಮಲೆಬೆಟ್ಟು, ಬಶೀರ್ ತಲಪ್ಪಾಡಿ, ಹಂಝ ಮೈಂದಾಲ ಹಾಗೂ ಹನೀಫ್ ಕಣ್ಣೂರು ರವರ ಪರಿಶ್ರಮದ ಫಲವಾಗಿ ಕುಮಾರ್ ರವರು ಭಾರತದ ರಾಯಭಾರಿ ಕಛೇರಿ ಮುಖಾಂತರ ಊರಿಗೆ ತಲುಪಿದ್ದಾರೆ.
ಕುಮಾರ್ ರವರಿಗೆ ನ್ಯಾಯಾಲಯ ದೊಡ್ಡದಾದ ಮೊತ್ತವೊಂದು ದಂಡವಾಗಿ ವಿಧಿಸಿದ್ದು, ಇದಕ್ಕಾಗಿ ಕೆಸಿಎಫ್ ಸೌದಿ ಅರೇಬಿಯಾ, ಮಂಗಳೂರು ಅಸೋಸಿಯೇಷನ್ ಸೌದಿ ಅರೇಬಿಯಾ, ಕೆವಿನ್ ನಝರೆತ್ (ತಾಜ್ ಮಹಲ್ ರೆಸ್ಟೋರೆಂಟ್ ಬುರೈದಾ), ಯೋಗೀಶ್ ಡಿ ಪೂಜಾರಿ (ಪುಲಿ ರೆಸ್ಟೋರೆಂಟ್ ಜುಬೈಲ್), ಕರಾವಳಿ ವೆಲ್ಫೇರ್ ಅಸೋಸಿಯೇಷನ್ ರಿಯಾದ್, ಪ್ಲಾಂಟ್ ಸೊಲ್ಯೂಷನ್ಸ್ ಕನ್ಸ್ಟ್ರಕ್ಷನ್ ಕಂಪೆನಿ ಲಿಮಿಟೆಡ್, ಮಲನಾಡ್ ಗಲ್ಫ್ ಎಜ್ಯುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್ ರಿಯಾದ್, ದಕ್ಷಿಣ ಕರ್ನಾಟಕ ಮುಸ್ಲಿಂ ಒಕ್ಕೂಟ ರಿಯಾದ್ ಸಮಿತಿಗಳು ಆರ್ಥಿಕ ಸಹಾಯವನ್ನೂ ಮಾಡಲಾಗಿದೆ.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ