ಹೊಸ ದಿಲ್ಲಿ: ಲೋಕಸಭಾ ಹಾಗೂ ರಾಜ್ಯಸಭಾ ಕಲಾಪಗಳೆರಡಕ್ಕೂ ತೈಲ ದರ ಏರಿಕೆಯ ಬಿಸಿ ತಟ್ಟಿದೆ. ಮಂಗಳವಾರ ಉಭಯ ಸದನಗಳು ಹಲವು ಬಾರಿ ಮುಂದೂಡಿಕೆಯಾಗಿವೆ. ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಸದನದಲ್ಲಿ ಭಾರೀ ಗದ್ದಲ, ಕೋಲಾಹಲ ಎಬ್ಬಿಸಿದ್ದು, ಸದಸ್ಯರು ಶಾಂತಿ ಕಾಪಾಡಬೇಕೆಂದು ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರು ಮಾಡಿದ ಪ್ರಯತ್ನಗಳೆಲ್ಲವೂ ವಿಫಲವಾಗಿವೆ.
ಲೋಕಸಭೆ ಕಲಾಪ ಮಂಗಳವಾರ ಆರಂಭವಾದ ಕೂಡಲೇ ಮುಂದೂಡಬೇಕಾಯ್ತು. ವಿಪಕ್ಷ ಸದಸ್ಯರು ಪ್ರಶ್ನೋತ್ತರ ಕಲಾಪಕ್ಕೂ ಅಡ್ಡಿಪಡಿಸಿದರು. ಕಾಂಗ್ರೆಸ್ ಸದಸ್ಯರು ಸದನದ ಬಾವಿಗೆ ಇಳಿದು ಇಂಧನ ದರ ಏರಿಕೆ ಹಿಂಪಡೆಯುವಂತೆ ಒತ್ತಾಯಿಸಿದರು.
ಡಿಎಂಕೆ ಹಾಗೂ ತೃಣಮೂಲ ಕಾಂಗ್ರೆಸ್ ಸದಸ್ಯರು ತಮ್ಮ ಸ್ಥಾನಗಳಲ್ಲೇ ಎದ್ದು ನಿಂತು ಪ್ರತಿಭಟಿಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಈ ವೇಳೆ ಮಾತನಾಡಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಲೋಕಸಭಾ ಟಿವಿಯು ವಿಪಕ್ಷಗಳ ಮಾತನ್ನು ಪ್ರಸಾರ ಮಾಡುತ್ತಿಲ್ಲ ಎಂದು ಆರೋಪಿಸಿದರು.
ಈ ವೇಳೆ ಮಧ್ಯ ಪ್ರವೇಶಿಸಿದ ಸ್ಪೀಕರ್ ಓಂ ಬಿರ್ಲಾ, ನೀವು ಘೋಷಣೆ ಕೂಗೋದನ್ನು ಹಾಗೂ ಸದನಕ್ಕೆ ಅಡ್ಡಿ ಪಡಿಸೋದನ್ನು ಟಿವಿಯಲ್ಲಿ ತೋರಿಸಬೇಕಾ? ದೇಶದ ಜನರು ಈ ದೃಶ್ಯಗಳನ್ನು ನೋಡಬೇಕಾ ಎಂದು ಸವಾಲೆಸೆದರು. ಈ ಪ್ರಶ್ನೆಗೆ ಉತ್ತರಿಸಿದ ಚೌಧರಿ, ಪ್ರತಿಭಟನೆಗಳೂ ಕೂಡಾ ಸಂಸದೀಯ ವ್ಯವಸ್ಥೆಯ ಒಂದು ಭಾಗ ಎಂದು ಹೇಳಿದರು.
ಇತ್ತ ರಾಜ್ಯಸಭೆಯಲ್ಲೂ ಇದೇ ಪರಿಸ್ಥಿತಿ ಮುಂದುವರೆದಿತ್ತು. ಸಚಿವರು ಹಲವು ಮಸೂದೆಗಳನ್ನು ಸದನದಲ್ಲಿ ಮಂಡಿಸಿದರು. ಆದ್ರೆ, ಈ ಎಲ್ಲಾ ಮಸೂದೆಗಳ ಕುರಿತ ಚರ್ಚೆಗಿಂತಲೂ ಇಂಧನ ದರ ಏರಿಕೆ ವಿರೋಧಿಸಿ ವಿಪಕ್ಷಗಳು ನಡೆಸುತ್ತಿರುವ ಪ್ರತಿಭಟನೆಯೇ ಮೇಲುಗೈ ಸಾಧಿಸಿತು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ