ನಂದಿಗ್ರಾಮ: ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಕೆಗೆ ತೆರಳಿದ್ದ ಸಂದರ್ಭದಲ್ಲಿ ಕೆಲವರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಸಿಎಂ ಮಮತಾ ಬ್ಯಾನರ್ಜಿಯ ಸುತ್ತ ಪೊಲೀಸ್ ಬಂದೋಬಸ್ತ್ ಇಲ್ಲದ ಸಮಯದಲ್ಲಿ ನಾಲ್ಕು ಅಥವಾ ಐದು ಜನರಿಂದ ಅವರ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಈ ಹಲ್ಲೆಯಿಂದ ಅವರ ಕಾಲಿನ ಭಾಗಕ್ಕೆ ತೀವ್ರ ಗಾಯಗಳಾಗಿದ್ದು, ಅವರನ್ನು ಮತ್ತೆ ಕೋಲ್ಕತ್ತಾಗೆ ಕರೆದುಕೊಂಡು ಹೋಗಲಾಗಿದೆ. ಅಲ್ಲದೆ, ಈ ಘಟನೆಯನ್ನು ಟಿಎಂಸಿ ಪಕ್ಷ ಉಗ್ರವಾಗಿ ಖಂಡಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗ ವರದಿ ಕೇಳಿದೆ.
ಈ ಘಟನೆ ಸಂಬಂಧ ಸ್ವತಃ ಮಾಧ್ಯಮದವರೊಂದಿಗೆ ಮಾತನಾಡಿರುವ ಸಿಎಂ ಮಮತಾ ಬ್ಯಾನರ್ಜಿ, “ನಾಮಪತ್ರ ಸಲ್ಲಿಸಿ ನಾನು ಮರಳಿ ಕಾರಿಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ನಾಲ್ಕರಿಂದ ಐದು ಜನ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಹಲ್ಲೆಯಿಂದ ನನ್ನ ಕಾಲಿನ ಭಾಗ ಊದಿಕೊಂಡಿದೆ. ಖಂಡಿತ ಇದು ಯೋಜಿತ ದಾಳಿಯಾಗಿದ್ದು, ಪೊಲೀಸರು ಇಲ್ಲದಿದ್ದಾಗ ನನ್ನ ಮೇಲೆ ದಾಳಿ ನಡೆಸಲು ಪಿತೂರಿ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.
ಇಂದು ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಸಿದ ನಂತರ ಮಮತಾ ಬ್ಯಾನರ್ಜಿ ರಾತ್ರಿ ಅಲ್ಲಿಯೇ ಉಳಿದುಕೊಳ್ಳಲು ನಿರ್ಧರಿಸಿದ್ದರು. ಆದರೆ, ಅಚಾನಕ್ಕಾಗಿ ನಡೆದ ಈ ಘಟನೆಯಿಂದಾಗಿ ಅವರನ್ನು ಇದೀಗ 130 ಕಿ.ಮೀ ದೂರದ ಕೋಲ್ಕತ್ತಾಗೆ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಕರೆದುಕೊಂಡು ಹೋಗಲಾಗಿದೆ.
ಹಿಂಸಾಚಾರದ ಆತಂಕದ ನಡುವೆ ಚುನಾವಣಾ ಆಯೋಗವು ಬಂಗಾಳ ಪೊಲೀಸ್ ಮಹಾನಿರ್ದೇಶಕ ವೀರೇಂದರ್ ಅವರನ್ನು ಬದಲಿಸಿದ ಒಂದು ದಿನದ ನಂತರ ಈ ದಾಳಿ ನಡೆದಿದೆ. 1987 ರ ಬ್ಯಾಚ್ನ ಐಪಿಎಸ್ ಅಧಿಕಾರಿ ಪಿ.ನಿರಜ್ನಾಯನ್ ಅವರನ್ನು ಹೊಸ ಪೊಲೀಸ್ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಮೇಲಿನ ದಾಳಿಯ ಬಗ್ಗೆ ಇದೀಗ ಚುನಾವಣಾ ಆಯೋಗ ಪಶ್ಚಿಮ ಬಂಗಾಳ ಪೊಲೀಸ್ ಮಹಾ ನಿರ್ದೇಶಕರಿಂದ ವರದಿ ಕೇಳಿದೆ.
ಈ ತಿಂಗಳ ಅಂತ್ಯದ ವೇಳೆಗೆ ಪ್ರಾರಂಭವಾಗುವ ಪಶ್ಚಿಮ ಬಂಗಾಳದ ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ನಂದಿಗ್ರಾಮ್ ಅತಿದೊಡ್ಡ ಯುದ್ಧದ ತಾಣವಾಗಲಿದೆ. ಇದೇ ಕ್ಷೇತ್ರದಲ್ಲಿ ಬಲವಾದ ಹಿಡಿತ ಹೊಂದಿದ್ದ ಮಮತಾ ಅವರ ಆಪ್ತ ಸೆವೆಂದು ಅಧಿಕಾರಿ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದು, ದೀದಿಗೆ ಸವಾಲು ಎಸೆದಿದ್ದಾರೆ. ಹೀಗಾಗಿ ಇಲ್ಲಿನ ಗೆಲುವು ಮಮತಾ ಬ್ಯಾನರ್ಜಿ ಅವರಿಗೆ ಪ್ರತಿಷ್ಠೆಯ ವಿಚಾರವಾಗಿದ್ದರೆ, ಬಿಜೆಪಿಗೂ ಅಳಿವು ಉಳಿವಿನ ಪ್ರಶ್ನೆಯಾಗಿದೆ.
ಇದೇ ಕ್ಷೇತ್ರದಲ್ಲೇ ಮಮತಾ ಬ್ಯಾನರ್ಜಿ ಕೃಷಿಭೂಮಿ ಸ್ವಾಧೀನದ ವಿರುದ್ಧದ ಜನ ಆಂದೋಲನ ರೂಪಿಸಿ ಆ ಮೂಲಕ ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಏರಿದ್ದರು. ಈ ಜನ ಆಂದೋಲನದಲ್ಲಿ ಸುವೆಂದು ಅಧಿಕಾರಿ ಸಹ ಪ್ರಮುಖ ಪಾತ್ರ ವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ