ನಂದಿಗ್ರಾಮ: ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಕೆಗೆ ತೆರಳಿದ್ದ ಸಂದರ್ಭದಲ್ಲಿ ಕೆಲವರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಸಿಎಂ ಮಮತಾ ಬ್ಯಾನರ್ಜಿಯ ಸುತ್ತ ಪೊಲೀಸ್ ಬಂದೋಬಸ್ತ್ ಇಲ್ಲದ ಸಮಯದಲ್ಲಿ ನಾಲ್ಕು ಅಥವಾ ಐದು ಜನರಿಂದ ಅವರ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಈ ಹಲ್ಲೆಯಿಂದ ಅವರ ಕಾಲಿನ ಭಾಗಕ್ಕೆ ತೀವ್ರ ಗಾಯಗಳಾಗಿದ್ದು, ಅವರನ್ನು ಮತ್ತೆ ಕೋಲ್ಕತ್ತಾಗೆ ಕರೆದುಕೊಂಡು ಹೋಗಲಾಗಿದೆ. ಅಲ್ಲದೆ, ಈ ಘಟನೆಯನ್ನು ಟಿಎಂಸಿ ಪಕ್ಷ ಉಗ್ರವಾಗಿ ಖಂಡಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗ ವರದಿ ಕೇಳಿದೆ.
ಈ ಘಟನೆ ಸಂಬಂಧ ಸ್ವತಃ ಮಾಧ್ಯಮದವರೊಂದಿಗೆ ಮಾತನಾಡಿರುವ ಸಿಎಂ ಮಮತಾ ಬ್ಯಾನರ್ಜಿ, “ನಾಮಪತ್ರ ಸಲ್ಲಿಸಿ ನಾನು ಮರಳಿ ಕಾರಿಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ನಾಲ್ಕರಿಂದ ಐದು ಜನ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಹಲ್ಲೆಯಿಂದ ನನ್ನ ಕಾಲಿನ ಭಾಗ ಊದಿಕೊಂಡಿದೆ. ಖಂಡಿತ ಇದು ಯೋಜಿತ ದಾಳಿಯಾಗಿದ್ದು, ಪೊಲೀಸರು ಇಲ್ಲದಿದ್ದಾಗ ನನ್ನ ಮೇಲೆ ದಾಳಿ ನಡೆಸಲು ಪಿತೂರಿ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.
ಇಂದು ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಸಿದ ನಂತರ ಮಮತಾ ಬ್ಯಾನರ್ಜಿ ರಾತ್ರಿ ಅಲ್ಲಿಯೇ ಉಳಿದುಕೊಳ್ಳಲು ನಿರ್ಧರಿಸಿದ್ದರು. ಆದರೆ, ಅಚಾನಕ್ಕಾಗಿ ನಡೆದ ಈ ಘಟನೆಯಿಂದಾಗಿ ಅವರನ್ನು ಇದೀಗ 130 ಕಿ.ಮೀ ದೂರದ ಕೋಲ್ಕತ್ತಾಗೆ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಕರೆದುಕೊಂಡು ಹೋಗಲಾಗಿದೆ.
ಹಿಂಸಾಚಾರದ ಆತಂಕದ ನಡುವೆ ಚುನಾವಣಾ ಆಯೋಗವು ಬಂಗಾಳ ಪೊಲೀಸ್ ಮಹಾನಿರ್ದೇಶಕ ವೀರೇಂದರ್ ಅವರನ್ನು ಬದಲಿಸಿದ ಒಂದು ದಿನದ ನಂತರ ಈ ದಾಳಿ ನಡೆದಿದೆ. 1987 ರ ಬ್ಯಾಚ್ನ ಐಪಿಎಸ್ ಅಧಿಕಾರಿ ಪಿ.ನಿರಜ್ನಾಯನ್ ಅವರನ್ನು ಹೊಸ ಪೊಲೀಸ್ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಮೇಲಿನ ದಾಳಿಯ ಬಗ್ಗೆ ಇದೀಗ ಚುನಾವಣಾ ಆಯೋಗ ಪಶ್ಚಿಮ ಬಂಗಾಳ ಪೊಲೀಸ್ ಮಹಾ ನಿರ್ದೇಶಕರಿಂದ ವರದಿ ಕೇಳಿದೆ.
ಈ ತಿಂಗಳ ಅಂತ್ಯದ ವೇಳೆಗೆ ಪ್ರಾರಂಭವಾಗುವ ಪಶ್ಚಿಮ ಬಂಗಾಳದ ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ನಂದಿಗ್ರಾಮ್ ಅತಿದೊಡ್ಡ ಯುದ್ಧದ ತಾಣವಾಗಲಿದೆ. ಇದೇ ಕ್ಷೇತ್ರದಲ್ಲಿ ಬಲವಾದ ಹಿಡಿತ ಹೊಂದಿದ್ದ ಮಮತಾ ಅವರ ಆಪ್ತ ಸೆವೆಂದು ಅಧಿಕಾರಿ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದು, ದೀದಿಗೆ ಸವಾಲು ಎಸೆದಿದ್ದಾರೆ. ಹೀಗಾಗಿ ಇಲ್ಲಿನ ಗೆಲುವು ಮಮತಾ ಬ್ಯಾನರ್ಜಿ ಅವರಿಗೆ ಪ್ರತಿಷ್ಠೆಯ ವಿಚಾರವಾಗಿದ್ದರೆ, ಬಿಜೆಪಿಗೂ ಅಳಿವು ಉಳಿವಿನ ಪ್ರಶ್ನೆಯಾಗಿದೆ.
ಇದೇ ಕ್ಷೇತ್ರದಲ್ಲೇ ಮಮತಾ ಬ್ಯಾನರ್ಜಿ ಕೃಷಿಭೂಮಿ ಸ್ವಾಧೀನದ ವಿರುದ್ಧದ ಜನ ಆಂದೋಲನ ರೂಪಿಸಿ ಆ ಮೂಲಕ ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಏರಿದ್ದರು. ಈ ಜನ ಆಂದೋಲನದಲ್ಲಿ ಸುವೆಂದು ಅಧಿಕಾರಿ ಸಹ ಪ್ರಮುಖ ಪಾತ್ರ ವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಹಂತಾವೈರಸ್ ಭೀತಿ; ಹೆಚ್ಚಿನ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ- ಪ್ರವಾಸಿ ಹಡಗುಗಳ ಮೇಲೆ ತೀವ್ರ ನಿಗಾ
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ