ರಿಯಾದ್: ಸೌದಿ ಕಾರ್ಮಿಕರ ಬಹುನಿರೀಕ್ಷಿತ ಪರಿಷ್ಕೃತ ಉದ್ಯೋಗ ಕಾನೂನುಗಳು ಮಾರ್ಚ್ 14 ರ ಭಾನುವಾರದಿಂದ ಜಾರಿಗೆ ಬರಲಿವೆ. ನವೆಂಬರ್ 4 ರಂದು ಸೌದಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಈ ಘೋಷಣೆ ಮಾಡಿದೆ.
ಕಾರ್ಮಿಕ ವಿವಾದಗಳನ್ನು ತೊಡೆದುಹಾಕಲು ಹಾಗೂ ಉದ್ಯೋಗದಾತ ಮತ್ತು ಉದ್ಯೋಗಿಗಳ ನಡುವಿನ ಒಪ್ಪಂದದ ಸಂಬಂಧವನ್ನು ಸುಧಾರಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗುತ್ತಿದೆ.
ಈ ಯೋಜನೆಯು ಖಾಸಗಿ ವಲಯದಲ್ಲಿ ಕೆಲಸ ಮಾಡುವ ಎಲ್ಲಾ ವಿದೇಶಿ ಕಾರ್ಮಿಕರಿಗೂ ಅನ್ವಯ. ಆದರೆ ಈ ಬದಲಾವಣೆ ಗೃಹ ಕಾರ್ಮಿಕರಿಗೆ ಅನ್ವಯಿಸುವುದಿಲ್ಲ. ಅಬ್ಷೀರ್ ಮತ್ತು ಖಿವಾ ಮುಂತಾದ ಪೋರ್ಟಲ್ಗಳ ಮೂಲಕ ಈ ಸೇವೆ ಲಭ್ಯವಿದೆ.
ಪರಿಷ್ಕೃತ ಕಾನೂನಿನ ಪ್ರಯೋಜನ
- ಕಾರ್ಮಿಕ ಮತ್ತು ಉದ್ಯೋಗದಾತ ನಡುವೆ ಸಹಿ ಮಾಡಿದ ಒಪ್ಪಂದದ ಆಧಾರದ ಮೇಲೆ ಕಾರ್ಮಿಕ ವಿವಾದಗಳಿಗೆ ಸಂಬಂಧಿಸಿದ ತೀರ್ಪು ನೀಡಲಾಗುತ್ತದೆ.
- ಒಪ್ಪಂದದ ಅವಧಿ ಮುಗಿದ ನಂತರ ಉದ್ಯೋಗಿಯು ಉದ್ಯೋಗದಾತರ ಒಪ್ಪಿಗೆಯಿಲ್ಲದೆ ಉದ್ಯೋಗಗಳನ್ನು ಬದಲಾಯಿಸಲು ಮತ್ತು ಪ್ರಾಯೋಜಕತ್ವವನ್ನು ಬದಲಾಯಿಸಲು ಅನುಮತಿಸಲಾಗುವುದು.
- ಒಪ್ಪಂದದ ಅವಧಿಯೊಳಗೆ ಕೆಲಸಗಾರನು ಉದ್ಯೋಗವನ್ನು ಬದಲಾಯಿಸಲು ಬಯಸಿದರೆ, ಉದ್ಯೋಗದಾತರಿಗೆ 90 ದಿನಗಳ ಮುಂಚಿತವಾಗಿ ನೋಟಿಸ್ ನೀಡಬೇಕು. ಆದರೆ ಈ ರೀತಿಯಾಗಿ ಸೇವೆಯನ್ನು ಕೊನೆಗೊಳಿಸಿದರೆ, ಉದ್ಯೋಗದಾತರಿಗೆ ಪರಿಹಾರವನ್ನು ಪಾವತಿಸಲು ಕೆಲಸಗಾರನು ಜವಾಬ್ದಾರನಾಗಿರುತ್ತಾನೆ.
- ಒಪ್ಪಂದದ ಅವಧಿ ಮುಗಿಯುವ ಮೊದಲು ನೌಕರನನ್ನು ವಜಾ ಮಾಡಿದರೆ ಉದ್ಯೋಗದಾತನು ಕೆಲಸಗಾರನಿಗೆ ಪರಿಹಾರವನ್ನು ಪಾವತಿಸಬೇಕಾಗುತ್ತದೆ.
- ಉದ್ಯೋಗದಾತ ಮತ್ತು ಉದ್ಯೋಗಿ ನಡುವಿನ ಒಪ್ಪಂದದ ಸೇವೆ ಕೊನೆಗೊಂಡಲ್ಲಿ, ಕೆಲಸಗಾರನು ತನ್ನದೇ ಆದ ನಿರ್ಗಮನ ಮತ್ತು ಮರು-ಪ್ರವೇಶ ವೀಸಾಗಳನ್ನು ಪಡೆದುಕೊಂಡು ಮನೆಗೆ ಮರಳಬಹುದು. ಇದಕ್ಕೆ ಪ್ರಾಯೋಜಕರ ಅನುಮತಿ ಅಗತ್ಯವಿಲ್ಲ.
ಆದಾಗ್ಯೂ, ಕೆಲಸಗಾರನು ದೇಶವನ್ನು ತೊರೆದಾಗ, ಪ್ರಾಯೋಜಕರಿಗೆ ವಿದ್ಯುನ್ಮಾನವಾಗಿ ಸಂದೇಶ ಲಭಿಸಲಿದೆ.
















ಇನ್ನಷ್ಟು ಸುದ್ದಿಗಳು
ಹಂತಾವೈರಸ್ ಭೀತಿ; ಹೆಚ್ಚಿನ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ- ಪ್ರವಾಸಿ ಹಡಗುಗಳ ಮೇಲೆ ತೀವ್ರ ನಿಗಾ
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ