ಬಂಟ್ವಾಳ ತಾಲೂಕಿನ ಅಮ್ಮುಂಜೆ, ಕರಿಯಂಗಳ ಮತ್ತು ಬಡಗಬೆಳ್ಳೂರು ಗ್ರಾಮದ 8 ಜಮಾತ್ ಗಳ ಒಕ್ಕೂಟವಾಗಿದೆ ಜಮಾತ್ ರಿಸರ್ಚ ಸೆಂಟರ್.
ಕಳೆದ 2 ವರ್ಷಗಳಿಂದ ನಿರಂತರವಾಗಿ ಸಮಾಜಿಕ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿರುವ ಇದರ ಪ್ರಮುಖ ಉದ್ದೇಶ ಸಮುದಾಯವನ್ನು ಶಿಕ್ಷಿತಗೊಳಿಸುದರೊಂದಿಗೆ ಉನ್ನತ ಸರ್ಕಾರಿ ಸೇವೆಗಳಲ್ಲಿ ತೊಡಗಿಸುವುದಾಗಿದೆ.
ಇದರ ಅಧೀನದಲ್ಲಿ ಆಯ್ದ 5 ಪ್ರಮುಖ ಸ್ಥಳಗಳಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ, ವೋಟರ್ ಐಡಿ ತಿದ್ದುಪಡಿ, ಲೇಬರ್ ಕಾರ್ಡ್, ಹಿರಿಯ ನಾಗರಿಕರ ಕಾರ್ಡ್ ನೋಂದಾವಣಿ ಕಾರ್ಯಗಾರ ವೆಲ್ನೆಸ್ ಹೆಲ್ಪ್ ಲೈನ್ ಮಂಗಳೂರು ಇವರ ಸಹಯೋಗದೊಂದಿಗೆ ನಡೆಯಲಿದೆ.
ದಿನಾಂಕ-13-3-21 ಗುಂಡಿಗುಮೇರ್ ಜುಮಾ ಮಸೀದಿ 14-3-21 ಬಡಕಬೈಲ್ ಮಸೀದಿ, 16-3-21 ಕೊಳತ್ತಮಜಲು ಜುಮಾ ಮಸೀದಿ,20-3-21 ಅಮ್ಮುಂಜೆ ಜುಮಾ ಮಸೀದಿ ಮತ್ತು 21-3-21 ರಂದು ಕಲಾಯಿ ಜುಮಾ ಮಸೀದಿಯಲ್ಲಿ ಕಾರ್ಯಗಾರ ನಡೆಯಲಿದೆ.
ಹಾಗೂ ದಿನಾಂಕ 14-3-21 ಆದಿತ್ಯವಾರದಂದು SSLC ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ ಬಡಕಬೈಲ್ ಇಮಾದ್ ಅಕಾಡೆಮಿಯಲ್ಲಿ ಖ್ಯಾತ ತರಬೇತುದಾರರಾದ ಅಬ್ದುಲ್ ರಝಾಕ್ ಅನಂತಾಡಿ ಯವರಿಂದ ನಡೆಯಲಿದೆ.

ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಈ ಎರಡು ಕಾರ್ಯಕ್ರಮದ ಸದುಪಯೋಗವನ್ನು ಪಡೆಯಲು ಸಮಿತಿಯ ಪಧಾದಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಂತಾವೈರಸ್ ಭೀತಿ; ಹೆಚ್ಚಿನ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ- ಪ್ರವಾಸಿ ಹಡಗುಗಳ ಮೇಲೆ ತೀವ್ರ ನಿಗಾ
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ