ಮಂಗಳೂರು :- ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕದ ರಾಜ್ಯಾದ್ಯಂತ ಝೀರೋ ಡ್ರಾಪೌಟ್ ಅಭಿಯಾನ ನಡೆಯುತ್ತಿದ್ದು, ಇದರ ಭಾಗವಾಗಿ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ನಡೆಸಿ ಹಿಂದಿರುಗುವ ವೇಳೆ ಗಾಂಜಾ ವ್ಯಸನಿಗಳು ಕ್ಯಾಂಪಸ್ ಫ್ರಂಟ್ ನಾಯಕರ ಮೇಲೆ ಹಲ್ಲೆ ನಡೆಸಿದ್ದು, ಮಾತ್ರವಲ್ಲದೆ ಸ್ಥಳಕ್ಕಾಗಮಿಸಿದ ಉಳ್ಳಾಲ ಪೋಲಿಸರು ಹಲ್ಲೆಗೊಳಗಾದವರನ್ನೇ ಬಂಧಿಸಿ, ಠಾಣೆಗೆ ಕರೆದೊಯ್ದು ಮಾರಣಾಂತಿಕ ಹಲ್ಲೆ ನಡೆಸಿ, ಧಾರ್ಮಿಕ ನಿಂದನೆ ನಡೆಸಿ, ಮಾರ್ಮಾಂಗಕ್ಕೆ ತಮ್ಮ ಬೂಟುಗಳಿಂದ ಒದ್ದು ತೀವ್ರ ಹಲ್ಲೆ ನಡೆಸಿದ್ದು ಇದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ಜಿಲ್ಲಾ ಸಮಿತಿ ವತಿಯಿಂದ ಜ್ಯೋತಿ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದರು.

ಜಿಲ್ಲೆಯಲ್ಲಿ ಗಾಂಜಾ ಮಾಫಿಯಾ ಸಕ್ರಿಯವಾಗಿದೆ ಎಂಬುದಕ್ಕೆ ಈ ಘಟನೆಯು ಸ್ಪಷ್ಟ ಉದಾಹರಣೆಯಾಗಿದೆ. ನ್ಯಾಯ ಒದಗಿಸಬೇಕಾದ ಪೊಲೀಸರು ಗಾಂಜಾ ಮಾಫಿಯದೊಂದಿಗೆ ಆಂತರಿಕವಾಗಿ ಶಮಿಲಾಗಿದ್ದಾರೆಯೇ ಎಂಬುದಕ್ಕೆ ಸಾರ್ವಜನಿಕರಲ್ಲಿ ಸಂಶಯ ಮೂಡಿದೆ. ವಿದ್ಯಾರ್ಥಿಗಳು ಶಾಲಾ ಕಾಲೇಜಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಡ್ರಾಪೌಟ್ ಆಗುತ್ತಿದ್ದು, ಇದನ್ನು ಮನಗಂಡು ಕ್ಯಾಂಪಸ್ ಫ್ರಂಟ್ ನಡೆಸುತ್ತಿರುವ ಝೀರೋ ಡ್ರಾಪೌಟ್ ಅಭಿಯಾನದ ಭಾಗವಾಗಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮ ನಡೆಸಲು ತೆರಳಿದ ಕ್ಯಾಂಪಸ್ ಫ್ರಂಟ್ ನಾಯಕರನ್ನು ಬಂಧಿಸಿ , ಠಾಣೆಯಲ್ಲಿ ಹಲ್ಲೆ ನಡೆಸಿದ ಪೋಲಿಸರ ನಡೆಯ ಕುರಿತು ತೀವ್ರ ಅಸಮಾಧಾನವಾಗಿದ್ದು, ಉನ್ನತ ಮಟ್ಟದ ಅಧಿಕಾರಿಗಳು ಇದರ ಬಗ್ಗೆ ಶೀಘ್ರ ಸೂಕ್ತ ಕ್ರಮ ಕೈಗೊಂಡು ಹಲ್ಲೆ ನಡೆಸಿದ ಗಾಂಜಾ ವ್ಯಸನಿಗಳಿನ್ನು ಬಂಧಿಸಿ, ದರ್ಪ ಮೆರೆದ ಪೊಲೀಸ್ ಅಧಿಕಾರಿಗಳನ್ನು ಕರ್ತವ್ಯದಿಂದ ವಜಾ ಮಾಡಬೇಕೆಂದು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಸಾಧಿಕ್ ಜಾರತ್ತಾರು ಆಗ್ರಹಿಸಿದರು.

ಉಳ್ಳಾಲ ಪೋಲಿಸರ ಕ್ರೌರ್ಯತೆಯನ್ನು ವಿದ್ಯಾರ್ಥಿ ಸಮುದಾಯ ಸಹಿಸಲ್ಲ, ಕಾನೂನು ಹೋರಾಟದ ಮೂಲಕ ಅವರಿಗೆ ಉತ್ತರ ನೀಡಲಿದ್ದೇವೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಮುರ್ಶಿದಾ ಮಂಗಳೂರು ಪ್ರತಿಭಟನೆಯಲ್ಲಿ ಎಚ್ಚರಿಸಿದರು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷ ಇಹ್ತಿಶಾಮ್ , ಕೋಶಾಧಿಕಾರಿ ಸುಲ್ತಾನ್ , ಕ್ಯಾಂಪಸ್ ಫ್ರಂಟ್ ಗ್ರಾಮಾಂತರ ಜಿಲ್ಲಾಧ್ಯಕ್ಷ ಸರ್ಫುದ್ದೀನ್ ಮಂಗಳೂರು, ಕಾರ್ಯದರ್ಶಿ ಅಶ್ರಫ್ ಜೋಕಟ್ಟೆ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್