ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಸಲಹೆಗಾರ ಪಿ.ಕೆ. ಸಿನ್ಹಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಿನ್ಹಾ ಅವರು ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ನಿವೃತ್ತರಾದ ನಂತರ, ಪ್ರಧಾನಿ ಕಚೇರಿಯಲ್ಲಿ ಪ್ರಧಾನ ಸಲಹೆಗಾರ ಎಂಬ ಹೊಸ ಹುದ್ದೆಯನ್ನು ಸೃಷ್ಟಿಸಿ, ಆ ಸ್ಥಾನಕ್ಕೆ ನೇಮಕ ಮಾಡಲಾಗಿತ್ತು. ಅವರು ಎಲ್ಲಾ ಸಚಿವಾಲಯಗಳು, ಇಲಾಖೆಗಳಿಗೆ ಸಂಬಂಧಿಸಿದ ನೀತಿಗಳ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದರು. ನೇಮಕಾತಿ ಆದೇಶದ ಪ್ರಕಾರ ಸಿನ್ಹಾ ಅವರ ಅಧಿಕಾರಾವಧಿ ಮುಂದಿನ ಆದೇಶದವರೆಗೆ ಅಥವಾ ಪ್ರಧಾನಿ ಮೋದಿ ಅವರ ಅಧಿಕಾರಾವಧಿ ಅಂತ್ಯದವರೆಗೆ ಇತ್ತು.
ಆದರೆ ಇದೀಗ ಸಿನ್ಹಾ ಅವರು ದಿಢೀರ್ ರಾಜೀನಾಮೆ ಸಲ್ಲಿಸಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ರಾಜಕೀಯ ಪಡಸಾಲೆಯಲ್ಲಿ ಹೊಸ ಚರ್ಚೆಯನ್ನೇ ಹುಟ್ಟು ಹಾಕಿದೆ. ವೈಯಕ್ತಿಕ ಕಾರಣಗಳನ್ನು ನೀಡಿ ಸಿನ್ಹಾ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಆದರೆ ಈ ಕುರಿತು ಪ್ರಧಾನಮಂತ್ರಿ ಕಾರ್ಯಾಲಯ ಯಾವುದೇ ಹೇಳಿಕೆಯನ್ನು ನೀಡಿಲ್ಲ.
1977ರ ಬ್ಯಾಚ್ನ ಉತ್ತರ ಪ್ರದೇಶ ಕೇಡರ್ನ ಐಎಎಸ್ ಅಧಿಕಾರಿಯಾಗಿದ್ದ ಸಿನ್ಹಾರನ್ನು ನಿವೃತ್ತಿ ನಂತರ 2019 ಆಗಸ್ಟ್ 30ರಂದು ಪ್ರಧಾನ ಮಂತ್ರಿ ಕಚೇರಿಯಲ್ಲಿ ವಿಶೇಷ ಕರ್ತವ್ಯ ಅಧಿಕಾರಿಯಾಗಿ (ಒಎಸ್ಡಿ) ನೇಮಕ ಮಾಡಲಾಗಿತ್ತು. ಬಳಿಕ 2019ರ ಸೆ.11ರಂದು ಅವರು ಪ್ರಧಾನಿ ನರೇಂದ್ರ ಮೋದಿಯವರ ಮುಖ್ಯ ಸಲಹೆಗಾರರಾಗಿ ನೇಮಕ ಮಾಡಲಾಯಿತು. ಸಿನ್ಹಾ ಅವರು ನಾಲ್ಕು ವರ್ಷಗಳ ಕಾಲ ಸಂಪುಟ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಇದಕ್ಕೂ ಮೊದಲು ಸಿನ್ಹಾ ಅವರು ವಿದ್ಯುತ್ ಸಚಿವಾಲಯದ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ