ಯುಎಇ: ಕಳೆದ ತಿಂಗಳು ಫೆಬ್ರವರಿ 11 ರಂದು ದುಬೈಯಲ್ಲಿ ಹೃದಯಾಘಾತದಿಂದ ನಿಧನರಾದ ಗುರುತು ಪರಿಚಯವಿಲ್ಲದ ಮೃತದೇಹವೊಂದನ್ನು ಅನಿವಾಸಿ ಕನ್ನಡಿಗರ ಸಂಘಟನೆ ಕರ್ನಾಟಕ ಕಲ್ಚರಲ್ ಫೌಂಡೇಶನ್ ಯುಎಇ ಸಮಿತಿ ಮೃತರ ಗುರುತು, ಮತ್ತಿತರ ದಾಖಲೆಗಳನ್ನು ಸರಿಪಡಿಸಿ ಮಾರ್ಚ್ 11 ರಂದು ಅಂತ್ಯಸಂಸ್ಕಾರ ನೆರವೇರಿಸಿದೆ. ಮೃತರನ್ನು ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾರ್ಶದ ಮುತ್ತಲಿಬ್(34) ಎಂದು ಗುರುತಿಸಲಾಗಿದೆ.
ಘಟನೆಯ ವಿವರ:
ಕಳೆದ ಫೆಬ್ರವರಿ 11 ರಂದು ದುಬೈಯಲ್ಲಿ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತರಾಗುತ್ತಾರೆ. ಕುಟುಂಬದಿಂದಲೂ, ಬಂಧು ಬಳಗದಿಂದಲೂ ಸಂಪೂರ್ಣ ಸಂಪರ್ಕ ಕಡಿದುಕೊಂಡಿದ್ದ ಈ ವ್ಯಕ್ತಿಯ ಮರಣವು ಯಾರ ಗಮನಕ್ಕೂ ಬಂದಿರಲಿಲ್ಲ. ತಿಂಗಳು ಕಳೆದರೂ ಸಂಬಂಧಪಟ್ಟವರು ಯಾರೂ ಸಂಪರ್ಕಿಸದ ಹಿನ್ನೆಲೆಯಲ್ಲಿ ಮೂರು ದಿವಸಗಳ ಹಿಂದೆ ಯುಎಇ ಭಾರತೀಯ ರಾಯಭಾರಿ ಕಚೇರಿಯು ಕೆಸಿಎಫ್ ಯುಎಇ ಸಮಿತಿಯನ್ನು ಕರೆದು ಗುರುತು ಪರಿಚಯವಿಲ್ಲದ ಭಾರತೀಯ ಮೂಲದ ಅನಾಥ ಮೃತದೇಹವೊಂದು ಸುಮಾರು ದಿನದಿಂದ ಶವಗಾರದಲ್ಲಿ ಬಾಕಿಯಾಗಿದೆಯೆಂಬ ಮಾಹಿತಿಯನ್ನು ನೀಡುತ್ತದೆ.
ತಕ್ಷಣ ಕಾರ್ಯ ಪ್ರವೃತ್ತರಾದ ಕೆಸಿಎಫ್ ಯುಎಇ ರಾಷ್ಟ್ರೀಯ ಅಧ್ಯಕ್ಷ ಅಬ್ದುಲ್ ಜಲೀಲ್ ನಿಝಾಮಿ ಎಮ್ಮೆಮಾಡು ಕೊಡಗು ಮತ್ತು ವೆಲ್ಫೇರ್ ವಿಭಾಗದ ಅಧ್ಯಕ್ಷ ಝೈನುದ್ದೀನ್ ಬೆಳ್ಳಾರೆ ನೇತೃತ್ವದಲ್ಲಿ ಕೆಸಿಎಫ್ ಯುಎಇ 24/7 ಸನ್ನದ್ಧ ತಂಡದ ಕಾರ್ಯಕರ್ತರನ್ನು ಮೂರು ತಂಡಗಳಾಗಿ ವಿಂಗಡಿಸಿ ಕಾರ್ಯ ಪ್ರವೃತ್ತರಾಗುತ್ತಾರೆ. ಆದರೆ ಮೃತರ ಪಾಸ್ಪೋರ್ಟ್, ವೀಸಾ ಸೇರಿದಂತೆ ಯಾವ ಐಡೆಂಟಿಟಿಯೂ ಸಿಗದ ಕಾರಣ ಗುರುತು ಪತ್ತೆ ಹಚ್ಚಲು ಕೆಸಿಎಫ್ ಹರಸಾಹಸ ಪಡುತ್ತದೆ.
ಕೆಸಿಎಫ್ ದುಬೈ ನಾರ್ತ್ ಝೋನಿನ ಮಜೀದ್ ಮಂಜನಾಡಿ, ಅಲಿ ಕೂಳೂರು ಮತ್ತು ಸಮದ್ ಬಿರಾಲಿ ನೇತೃತ್ವದ ತಂಡ ಪೋಲಿಸ್ ಇಲಾಖೆ, ವೈದ್ಯಕೀಯ ದಾಖಲೆ ಮತ್ತು ಇಂಡಿಯನ್ ಕನ್ಸುಲೇಟ್ ಗಳಲ್ಲಿ ಅಲೆದಾಡಿ ಕೊನೆಗೂ ನಿರಂತರ ಪ್ರಯತ್ನದ ಫಲವಾಗಿ ಮೃತರು ಬಂಟ್ವಾಳ ತಾಲೂಕಿನ ಮುತ್ತಲಿಬ್ ಎಂದು ಖಚಿತಪಡಿಸಿ ಅಗತ್ಯ ದಾಖಲೆಗಳನ್ನು ಸಿದ್ದಪಡಿಸುತ್ತಾರೆ. ಆದರೆ ಪಾಸ್ಪೋರ್ಟ್ ವೀಸಾ ಸೇರಿದಂತೆ ಯಾವ ದಾಖಲೆಗಳೂ ಇಲ್ಲದ ಕಾರಣ ದುಬೈ ಸರ್ಕಾರದ ನೀತಿ ನಿಯಮಾವಳಿಯನುಸಾರ ಮೃತರ ಅಂತ್ಯಸಂಸ್ಕಾರಕ್ಕೆ ತೊಡಕಾಗುತ್ತದೆ. ಅಲ್ಲೂ ಕಾರ್ಯಪ್ರವೃತ್ತರಾದ ಕೆಸಿಎಫ್ ಶತಾಯಗತಾಯ ಪ್ರಯತ್ನಿಸಿ ಊರಿನಲ್ಲಿರುವ ಕೆಸಿಎಫ್ ಸೌದಿ ಅರೇಬಿಯಾ ಅಧ್ಯಕ್ಷರಾದ ಯೂಸುಫ್ ಸಖಾಫಿ ಬೈತಾರ್ ಮತ್ತು ಕುಟುಂಬಸ್ಥರ ಸಹಕಾರದೊಂದಿಗೆ ಪವರ್ ಆಫ್ ಅಟಾರ್ನಿ ಪಡೆದು ಕೆಸಿಎಫ್ ಸಂಬಂಧಿತ ವ್ಯಕ್ತಿಗಳ ಹೆಸರಿನಲ್ಲಿ ಪಾಸ್ಪೋರ್ಟ್ ಮತ್ತಿತರ ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿ ಕೇವಲ ಎರಡೇ ದಿನಗಳ ಒಳಗಾಗಿ ದುಬೈಯ ಅಲ್ ಕೂಜ್ ಖಬರ್ ಸ್ಥಾನದಲ್ಲಿ ಅಂತ್ಯಸಂಸ್ಕಾರ ಮಾಡುವಲ್ಲಿ ಕೆಸಿಎಫ್ ಯುಎಇ ಯಶಸ್ವಿಯಾಗಿದೆ.
ಕೆಸಿಎಫ್ ದುಬೈ ಸೌತ್ ಝೋನ್ ಕೋಶಾಧಿಕಾರಿಯೂ, ಅಲ್ ಬರ್ಶಾ ಮಸ್ಜಿದ್ ಇಮಾಮರೂ ಆಗಿರುವ ಇಲ್ಯಾಸ್ ಮದನಿ ನೇತೃತ್ವದಲ್ಲಿ ದಫನ್ ಕಾರ್ಯದ ನೇತೃತ್ವ ವಹಿಸಿದ್ದರು, ಈ ಸಂದರ್ಭ ದುಬೈ ಸೌತ್ ಝೋನ್ ಅಧ್ಯಕ್ಷ ಅಬ್ದುಲ್ ಅಝೀಝ್ ಅಹ್ಸನಿ, ಸಾಂತ್ವನ ವಿಭಾಗ ಕಾರ್ಯದರ್ಶಿ ಮನ್ಸೂರ್ ಹರೇಕಳ, ಶರೀಫ್ ಬೈರಿಕಟ್ಟೆ ಮುಂತಾದವರು ಜೊತೆಗಿದ್ದು ಸಹಕರಿಸಿದರು.
ಹೀಗೆ ಒಂದು ತಿಂಗಳು ಕಾಲ ಅನಾಥವಾಗಿದ್ದ ಮೃತದೇಹವೊಂದಕ್ಕೆ ಮುಕ್ತಿ ಕಲ್ಪಿಸಿದ ಕೆಸಿಎಫ್ ಯುಎಇ ಸನ್ನದ್ದ ತಂಡದ ಮಾನವೀಯ ಸೇವೆ ಸದ್ಯ ಎಲ್ಲೆಡೆ ಪ್ರಶಂಸೆಗೆ ಕಾರಣವಾಗಿದೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)