ಪವಿತ್ರ ಮಕ್ಕತುಲ್ ಮುಕರ್ರಮದಲ್ಲಿರುವ ಏಷ್ಯನ್ ಆಸ್ಪತ್ರೆಯಲ್ಲಿ ಸೇವೆಗಯ್ಯುತ್ತಿದ್ದ ಉಪ್ಪಳದ ಡಾ| ಎ ಕೆ ಖಾಸಿಮ್ ರವರು ಇಂದು ಬೆಳಿಗ್ಗೆ ಮರಣ ಹೊಂದಿದ್ದಾರೆ. ಒಮ್ಮೆ ಜಿದ್ದಾದಿಂದ ಮುಂಬೈಗೆ ಹೋಗುತ್ತಿದ್ದ ವಿಮಾನದಲ್ಲಿ 55 ವರ್ಷದ ಮಹಿಳೆಯೊಬ್ಬರಿಗೆ ಹೃದಯಾಘಾತವಾದ ಸಂದರ್ಭದಲ್ಲಿ ಡಾ| ಖಾಸಿಮ್ ರವರು ನೆರವಾಗಿ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದರು. ಅನಿವಾಸಿ ಕನ್ನಡಿಗರಿಗೆಂದೂ ಆಸರೆಯಾಗಿದ್ದ ಇವರ ಅಗಲುವಿಕೆ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ.
ಕೆಸಿಎಫ್ ಸಂಘಟನೆಗೆ ಬೆನ್ನೆಲುಬಾಗಿದ್ದ ಇವರು ಹಜ್ಜ್ ಸಮಯದಲ್ಲಿ KCF – HVC ಸ್ವಯಂಸೇವಕರಿಗೆ ಬೇಕಾದ ಎಲ್ಲಾ ರೀತಿಯ ಮಾರ್ಗದರ್ಶನ ಗಳನ್ನು ನೀಡುತ್ತಿದ್ದರು.
ಅಲ್ಲಾಹನು ಮೃತರಿಗೆ ಮಗ್’ಫಿರತ್ ಹಾಗೂ ಮರ್’ಹಮತ್ ನೀಡಿ ಅನುಗ್ರಹಿಸಲಿ. ಅವರ ಖಬರನ್ನು ಸ್ವರ್ಗದ ಉದ್ಯಾನವನ್ನಾಗಿ ಮಾರ್ಪಡಿಸಲಿ. ಮೃತರ ಕುಟುಂಬ, ಬಂದು-ಬಳಗದವರಿಗೆ ದುಃಖವನ್ನು ಸಹಿಸುವ ತಾಳ್ಮೆ ಹಾಗೂ ಸಹನೆ ಶಕ್ತಿಯನ್ನು ಅಲ್ಲಾಹನು ನೀಡಿಲಿ. ಇವರ ಅಕಾಲಿಕ ಮರಣಕ್ಕೆ ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಡಾ| ಶೇಖ್ ಬಾವ ಮಂಗಳೂರು, ಪ್ರಧಾನ ಕಾರ್ಯದರ್ಶಿ ಜನಾಬ್ ಖಮರುದ್ದೀನ್ ಗೂಡಿನಬಳಿ ಹಾಗೂ ಸೌದಿ ಅರೇಬಿಯಾ ರಾಷ್ಟ್ರೀಯ ಅಧ್ಯಕ್ಷರಾದ ಡಿಪಿ ಯೂಸುಫ್ ಸಖಾಫಿ ಬೈತಾರ್ ರವರು ಸಂತಾಪ ಸೂಚಿಸಿದರು.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ