ಕೈರೋ :ದಕ್ಷಿಣ ಈಜಿಪ್ಟ್ನಲ್ಲಿ ಶುಕ್ರವಾರ ಎರಡು ರೈಲುಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಈ ಭೀಕರ ಅವಘಡದಲ್ಲಿ ಕನಿಷ್ಠ 32 ಮಂದಿ ಪ್ರಯಾಣಿಕರು ಬಲಿಯಾಗಿದ್ದಾರೆ. 66 ಮಂದಿ ಗಾಯಗೊಂಡಿದ್ದಾರೆ. ಭೀಕರ ಅವಘಡ ಸಂಬಂಧ ಪ್ರತಿಕ್ರಿಯೆ ನೀಡಿರುವ ಅಲ್ಲಿನ ಆರೋಗ್ಯ ಸಚಿವರು ಇದು ದೇಶದಲ್ಲಿ ಇತ್ತೀಚೆಗೆ ಸಂಭವಿಸಿದ ಅತಿದೊಡ್ಡ ಮಾರಕ ಅಪಘಾತ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ರಾಜಧಾನಿ ಕೈರೋದಿಂದ 460 ಕಿ.ಮೀ. ದೂರದಲ್ಲಿರುವ ತಹ್ತಾ ಜಿಲ್ಲೆಯ ಸೋಹಾಗ್ ಪ್ರಾಂತ್ಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, 12 ಹೆಚ್ಚು ಆ್ಯಂಬುಲೆನ್ಸ್ಗಳು ಸ್ಥಳಕ್ಕೆ ಆಗಮಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುತ್ತಿವೆ. ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.
ರೈಲು ಅಪಘಾತದಲ್ಲಿ 32 ಮಂದಿ ಬಲಿಯಾಗಿದ್ದಾರೆ. 66 ಜನರ ಪ್ರಯಾಣಿಕರು ಗಾಯಗೊಂಡಿದ್ದು, ಅವರೆಲ್ಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ. ಎರಡು ರೈಲುಗಳು ಮುಖಾಮುಖಿಯಾಗಿ ಗುದ್ದಿದ ರಭಸಕ್ಕೆ ಎರಡು ರೈಲಿನ ಹಲವು ಬೋಗಿಗಳು ಸಂಪೂರ್ಣ ಜಖಂಗೊಂಡಿವೆ.
ಕಳೆದ ವರ್ಷ ಮಾರ್ಚ್ನಲ್ಲಿ ಈಜಿಪ್ಟ್ ರಾಜಧಾನಿ ಕೈರೋದಲ್ಲಿ ಎರಡು ಪ್ಯಾಸೆಂಜರ್ ರೈಲುಗಳು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 13 ಜನರು ಗಾಯಗೊಂಡಿದ್ದರು. ಈ ಅಪಘಾತದ ನಂತರ ದೇಶಾದ್ಯಂತ ರೈಲು ಸೇವೆಗಳನ್ನು ಸಂಕ್ಷಿಪ್ತವಾಗಿ ಸ್ಥಗಿತಗೊಳಿಸಲಾಗಿತ್ತು. ಕೆಟ್ಟ ಹವಾಮಾನದ ಕಾರಣದಿಂದ ಸಂಕೇತಗಳು ಕಾರ್ಯನಿರ್ವಹಿಸದ ಕಾರಣ ರೈಲು ಅಪಘಾತಕ್ಕೆ ಕಾರಣ ಎಂದು ರೈಲು ವ್ಯವಸ್ಥಾಪಕರು ಹೇಳಿದ್ದರು. ಮತ್ತು ಫೆಬ್ರವರಿ 2019 ರಲ್ಲಿ, ಕೈರೋ ಮುಖ್ಯ ರೈಲು ನಿಲ್ದಾಣದಲ್ಲಿ ರೈಲು ಹಳಿ ತಪ್ಪಿ 20 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ಈ ಅವಘಡದಿಂದಾಗಿ ಸಾರಿಗೆ ಸಚಿವರು ರಾಜೀನಾಮೆ ನೀಡಿದ್ದರು
















ಇನ್ನಷ್ಟು ಸುದ್ದಿಗಳು
ಇರಾನ್ ಒಪ್ಪಂದ ಪಾಲಿಸದಿದ್ದರೆ ನೆತ್ತಿ ಮೇಲೆ ಬಾಂಬ್ ವರ್ಷಣ- ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಇರಾನ್-ಯುಎಸ್ ಕದನ ವಿರಾಮ: ಡೊನಾಲ್ಡ್ ಟ್ರಂಪ್ ಘೋಷಣೆ- ಇರಾನ್ನಿಂದಲೂ ದೃಢೀಕರಣ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್