ಮಂಗಳೂರು,ಮಾ.30: ನಿನ್ನೆ ತಡ ರಾತ್ರಿ ಮಂಗಳೂರು ಸಮೀಪದ ಫರಂಗಿಪೇಟೆ ಯಲ್ಲಿರುವ ಬಿರ್ರುಲ್ ವಾಲಿದೈನ್ ಮಸೀದಿಯ ಮುಅಝ್ಝಿನ್ ರವರ ಮೇಲೆ ದುಷ್ಕರ್ಮಿಗಳು ಏಕಾಏಕಿ ಮಸೀದಿಗೆ ನುಗ್ಗಿ ಹಲ್ಲೆ ನಡೆಸಿರುತ್ತಾರೆ.
ದುಷ್ಕರ್ಮಿಗಳ ಈ ಕೃತ್ಯವು ಮತೀಯ ಸೌಹಾರ್ದವನ್ನು ಕೆಡಿಸುವ ಹುನ್ನಾರವಾಗಿದೆ. ಮುಸ್ಲಿಮ್ ಧಾರ್ಮಿಕ ಕೇಂದ್ರಗಳ ಮೇಲೆ ಧಾಳಿ ನಡೆಸಿ ಆ ಮೂಲಕ ಒಂದು ಧರ್ಮದ ಜನರ ಭಾವನೆಗಳನ್ನು ಕೆರಳಿಸಿ, ಕೋಮು ಪ್ರಚೋದನೆಗೆ ಅವಕಾಶ ಮಾಡುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದೆ. ಇದನ್ನು ಮುಸ್ಲಿಮ್ ಒಕ್ಕೂಟವು ತೀವ್ರವಾಗಿ ಖಂಡಿಸುತ್ತದೆ.
ಇತ್ತೀಚೆಗೆ ಇಂತಹ ಹಲವಾರು ಕೋಮು ಪ್ರಚೋದನಾ ಕೃತ್ಯಗಳು ಅಲ್ಲಲ್ಲಿ ಕಾಣತೊಡಗಿವೆ. ಮೊದಲೇ ಕೋಮು ಸೂಕ್ಷ್ಮವಾದ ಈ ಜಿಲ್ಲೆಯಲ್ಲಿ ಇದರಿಂದಾಗಿ ಕೋಮು ಸೌಹಾರ್ದಕ್ಕೆ ಧಕ್ಕೆಯುಂಟಾಗುತ್ತಿವೆ.
ಈ ಕೃತ್ಯವನ್ನು ಯಾರೇ ಮಾಡಿದರೂ, ಗ್ರಹ ಇಲಾಖೆ ಕೂಡಲೇ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಿ ನ್ಯಾಯವನ್ನು ಒದಗಿಸಬೇಕು. ಇಲ್ಲವಾದಲ್ಲಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಜಿಲ್ಲಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಇದರ ಅಧ್ಯಕ್ಷರಾದ ಕೆ ಅಶ್ರಫ್ (ಮಾಜಿ ಮೇಯರ್) ಎಚ್ಚರಿಕೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ