ಮಂಗಳೂರು,ಮಾ.30: ನಿನ್ನೆ ತಡ ರಾತ್ರಿ ಮಂಗಳೂರು ಸಮೀಪದ ಫರಂಗಿಪೇಟೆ ಯಲ್ಲಿರುವ ಬಿರ್ರುಲ್ ವಾಲಿದೈನ್ ಮಸೀದಿಯ ಮುಅಝ್ಝಿನ್ ರವರ ಮೇಲೆ ದುಷ್ಕರ್ಮಿಗಳು ಏಕಾಏಕಿ ಮಸೀದಿಗೆ ನುಗ್ಗಿ ಹಲ್ಲೆ ನಡೆಸಿರುತ್ತಾರೆ.
ದುಷ್ಕರ್ಮಿಗಳ ಈ ಕೃತ್ಯವು ಮತೀಯ ಸೌಹಾರ್ದವನ್ನು ಕೆಡಿಸುವ ಹುನ್ನಾರವಾಗಿದೆ. ಮುಸ್ಲಿಮ್ ಧಾರ್ಮಿಕ ಕೇಂದ್ರಗಳ ಮೇಲೆ ಧಾಳಿ ನಡೆಸಿ ಆ ಮೂಲಕ ಒಂದು ಧರ್ಮದ ಜನರ ಭಾವನೆಗಳನ್ನು ಕೆರಳಿಸಿ, ಕೋಮು ಪ್ರಚೋದನೆಗೆ ಅವಕಾಶ ಮಾಡುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದೆ. ಇದನ್ನು ಮುಸ್ಲಿಮ್ ಒಕ್ಕೂಟವು ತೀವ್ರವಾಗಿ ಖಂಡಿಸುತ್ತದೆ.
ಇತ್ತೀಚೆಗೆ ಇಂತಹ ಹಲವಾರು ಕೋಮು ಪ್ರಚೋದನಾ ಕೃತ್ಯಗಳು ಅಲ್ಲಲ್ಲಿ ಕಾಣತೊಡಗಿವೆ. ಮೊದಲೇ ಕೋಮು ಸೂಕ್ಷ್ಮವಾದ ಈ ಜಿಲ್ಲೆಯಲ್ಲಿ ಇದರಿಂದಾಗಿ ಕೋಮು ಸೌಹಾರ್ದಕ್ಕೆ ಧಕ್ಕೆಯುಂಟಾಗುತ್ತಿವೆ.
ಈ ಕೃತ್ಯವನ್ನು ಯಾರೇ ಮಾಡಿದರೂ, ಗ್ರಹ ಇಲಾಖೆ ಕೂಡಲೇ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಿ ನ್ಯಾಯವನ್ನು ಒದಗಿಸಬೇಕು. ಇಲ್ಲವಾದಲ್ಲಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಜಿಲ್ಲಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಇದರ ಅಧ್ಯಕ್ಷರಾದ ಕೆ ಅಶ್ರಫ್ (ಮಾಜಿ ಮೇಯರ್) ಎಚ್ಚರಿಕೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ