ಉಳ್ಳಾಲ: ಇಲ್ಲಿನ ಕೆ.ಸಿ ರೋಡು ಬಳಿ ಬಾಲಕನ ಕೊಲೆಗೆ ಸಂಬಂಧಿಸಿದಂತೆ ಉಳ್ಳಾಲ ಠಾಣಾ ಪೊಲೀಸರು ಆತನ ಪಬ್ಜಿ ಜತೆಗಾರ ದೀಪಕ್ (18)ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಕೀಫ್ ಯಾವತ್ತೂ ಪಬ್ ಜಿ ಆಟದಲ್ಲಿ ಗೆಲ್ಲುತ್ತಿದ್ದ. ನೆರೆಮನೆಯ ನಿವಾಸಿ ದೀಪಕ್ ಜತೆಗೂ ಆಟಕ್ಕೆ ಮುಂದಾಗಿದ್ದ. ಆನ್ ಲೈನ್ ಮೂಲಕ ಆಟವಾಡಿದ ಸಂದರ್ಭ ಹಕೀಬ್ ಗೆಲುವು ಸಾಧಿಸಿದಾಗ ಸಂಶಯ ವ್ಯಕ್ತಪಡಿಸಿದ ದೀಪಕ್, ನಿನ್ನ ಆಟ ಬೇರೆ ಯಾರೋ ಆಡುತ್ತಿದ್ದಾರೆ. ಅದಕ್ಕೆ ಎದುರುಬದುರಾಗಿ ಕುಳಿತು ಆಡುವ ಸವಾಲು ಹಾಕಿದ್ದ. ಅದರಂತೆ ಶನಿವಾರ ಸಂಜೆ ಬಳಿಕ ಇಬ್ಬರೂ ಜೊತೆಯಾಗಿ ಆಟವಾಡಲು ಆರಂಭಿಸಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.
ಆಟದಲ್ಲಿ ಹಾಕೀಬ್ ಸೋಲನು ಕಂಡಿದ್ದಾನೆ. ಇದರಿಂದ ದೀಪಕ್- ಹಕೀಫ್ ನಡುವೆ ವಾಗ್ವಾದ ನಡೆದಿತ್ತು. ಇದರಿಂದ ಕುಪಿತಗೊಂಡ ಹಕೀಫ್ ಸಣ್ಣ ಕಲ್ಲೆಸೆದು ದೀಪಕ್ಗೆ ಹಲ್ಲೆ ನಡೆಸಿದ್ದ. ಇದರಿಂದ ರೊಚ್ಚಿಗೆದ್ದ ದೀಪಕ್ ದೊಡ್ಡ ಕಲ್ಲನ್ನು ಹಕೀಫ್ ಮೇಲೆ ಹಾಕಿದಾಗ ವಿಪರೀತ ರಕ್ತಸ್ರಾವ ಉಂಟಾಗಿ ಆತ ಸ್ಥಳದಲ್ಲೇ ಕುಸಿದುಬಿದ್ದಿದ್ದ. ಗಾಬರಿಗೊಂಡ ದೀಪಕ್ ಆತನನ್ನು ಸಮೀಪದಲ್ಲೇ ಇದ್ದ ಕಂಪೌಂಡ್ ಪಕ್ಕಕ್ಕೆ ಕರೆದೊಯ್ದು ಬಾಳೆ ಎಲೆ, ತೆಂಗಿನಗರಿಗಳನ್ನು ಮುಚ್ಚಿ ಪರಾರಿಯಾಗಿದ್ದನು ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.
ಭಾನುವಾರ ಬೆಳಿಗ್ಗೆ ಸ್ಥಳೀಯರು ಹಕೀಫ್ನ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ದೀಪಕ್ ನನ್ನು ವಶಕ್ಕೆ ಪಡೆದುಕೊಂಡಿರುವ ಉಳ್ಳಾಲ ಪೊಲೀಸರು ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.
ಸ್ಥಳಕ್ಕೆ ಕಮೀಷನರ್ ಭೇಟಿ: ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಭೇಟಿ ನೀಡಿದರು. ಪೋಷಕರು ಮಕ್ಕಳ ಕೈಗೆ ಮೊಬೈಲ್ ನೀಡಿದಾಗ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದರು. ಪಬ್ ಜಿ ಆಟ ಬ್ಯಾನ್ ಆದರೂ ಬೇರೆ ವರ್ಷನ್ ಗಳನ್ನು ಮಕ್ಕಳು ಉಪಯೋಗಿಸುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು.
ಕೆ.ಸಿ ರೋಡ್ ನಿವಾಸಿ ಹನೀಫ್ ಎಂಬವರ ಪುತ್ರ ಹಕೀಫ್ (12) ಮೃತ ಬಾಲಕ. ಅವರ ಮನೆಯಿಂದ 3 ಕಿಲೊ ಮೀಟರ್ ದೂರದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು.ಶನಿವಾರ ಸಂಜೆಯಿಂದ ನಾಪತ್ತೆಯಾಗಿದ್ದ ಹಕೀಫ್ ಕುರಿತು ಹೆತ್ತವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ