ಪುತ್ತೂರು: ಧಾರ್ಮಿಕ ಮತ್ತು ಲೌಕಿಕ ಸಮನ್ವಯ ವಿದ್ಯಾಭ್ಯಾಸದ ಗುರಿಯಿಟ್ಟು ಪುತ್ತೂರು ಈಶ್ವರಮಂಗಳದಲ್ಲಿ ಕಾರ್ಯಾಚರಿಸುತ್ತಿರುವ ತ್ವೈಬ ಎಜುಕೇಶನಲ್ ಸೆಂಟರ್ ಈಶ್ವರಮಂಗಲ ಇದರ ದಶವಾರ್ಷಿಕ ಕಾರ್ಯಕ್ರಮವು ವೈವಿಧ್ಯಮಯ ಪದ್ದತಿಗಳೊಂದಿಗೆ ಜರಗಲಿದೆ.
ಈ ಒಂದು ವರ್ಷ ನಡೆಯುವ ಕಾರ್ಯಕ್ರಮಕ್ಕೆ ತ್ವೈಬ ಅಧ್ಯಕ್ಷರಾದ ಸಯ್ಯಿದ್ ಝೈನುಲ್ ಆಬಿದೀನ್ ಮುತ್ತು ಕೋಯ ತಂಙಳ್ ಕಣ್ಣವಂ ರವರ ನೇತೃತ್ವದಲ್ಲಿ ಸ್ವಾಗತ ಸಮಿತಿಯನ್ನು ರಚಿಸಲಾಯಿತು. ಸಭೆಯನ್ನು ಸಯ್ಯಿದ್ ಪೂಕುಂಞಿ ತಂಙಳ್ ಅಲ್ ಅಹ್ದಲ್ ಆದೂರು ದುಆ ಮಾಡಿ ಉದ್ಘಾಟಿಸಿದರು.
ವೈವಿಧ್ಯ ಧಾರ್ಮಿಕ ಸಾಮಾಜಿಕ ಸಾಂಸ್ಕೃತಿಕ ಯೋಜನೆಗಳೊಂದಿಗೆ ವರ್ಷವಿಡೀ ದಶವಾರ್ಷಿಕ ಸಡಗರ ಸಂಭ್ರಮದಲ್ಲಿ ಆಚರಿಸಲಾಗುವುದು. ಪ್ರಸ್ತುತ ಸಂಭ್ರಮದ ಸ್ವಾಗತ ಸಮಿತಿಯ ಚೆಯರ್ಮ್ಯಾನ್ ಆಗಿ ಸಯ್ಯಿದ್ ಉಮರ್ ಜಿಫ್ರಿ ತಂಙಳ್, ವರ್ಕಿಂಗ್ ಚೆಯರ್ಮ್ಯಾನ್ ಮುಹಮ್ಮದ್ ಮದನಿ, ಕನ್ವೀನರ್ ಅಬ್ದುಲ್ ಜಲೀಲ್ ಸಖಾಫಿ ಕರ್ನೂರ್, ಕೋಶಾಧಿಕಾರಿ ಅಬ್ದುಲ್ ಹಮೀದ್ ಪಳ್ಳತ್ತೂರ್ ರವರನ್ನು ಆಯ್ಕೆ ಮಾಡಲಾಯಿತು.
ಸಯ್ಯಿದ್ ಉಮರ್ ಜಿಫ್ರಿ ತಂಙಳ್, ಸೂಫಿ ಮದನಿ ಪಳ್ಳಂಗೋಡ್, ದಾವೂದುಲ್ ಹಕೀಂ ಹಿಮಮಿ ಸಖಾಫಿ ತ್ವೈಬ, ಮುಹಮ್ಮದ್ ಮದನಿ, ಎಂಎ ಮುಹಮ್ಮದ್ ಕುಂಞ್ಞಿ ಮುಂತಾದವರು ಸಭೆಯಲ್ಲಿ ಮಾತನಾಡಿದರು. ತ್ವೈಬ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಝ್ ಮಿಸ್ಬಾಹಿ ಸ್ವಾಗತಿಸಿ ಅಬ್ದುಲ್ ಜಲೀಲ್ ಸಖಾಫಿ ಕರ್ನೂರ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್