janadhvani

Kannada Online News Paper

ಎಸ್ಸೆಸ್ಸೆಫ್ ಕ್ಯಾಂಪಸ್ ಐತ್’ಹಾಝ್ ಕಾರ್ಯಾಗಾರ

ಬಂಟ್ವಾಳ: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಕ್ಯಾಂಪಸ್ ಐತ್ಝಾಝ್ ಕಾರ್ಯಾಗಾರವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗರವರ ಅಧ್ಯಕ್ಷತೆಯಲ್ಲಿ ಮಜ್ಲಿಸ್ ಗಾಣೆಮಾರ್,ಬಡಕಬೈಲ್ ನಲ್ಲಿ ನಡೆಯಿತು.

ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಕಾರ್ಯಾಗಾರವನ್ನು ಉದ್ಘಾಟಿಸಿದರು.

ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿಗಳಾದ ಸಫ್ವಾನ್ ಚಿಕ್ಕಮಂಗಳೂರು,ನವಾಝ್ ಭಟ್ಕಳ,ಕ್ಯಾಂಪಸ್ ಸಿಂಡಿಕೇಟ್ ಸದಸ್ಯರಾದ ನಾಸಿರ್ ಬಜ್ಪೆ,ರಖೀಬ್ ಉಡುಪಿ,ಮುಜೀಬ್ ಕೊಡಗು,ಸಪ್ದರ್ ಬೆಂಗಳೂರು,ಉಬೈದ್ ಮಂಗಳರು ಮೊದಲಾದವರು ಉಪಸ್ಥಿತರಿದ್ದರು.

ಕ್ಯಾಂಪಸ್ ನ ಮುಂದಿನ 6 ತಿಂಗಳ ಯೋಜನೆಗಳ ಬಗ್ಗೆ ಸಮಗ್ರ ಚರ್ಚೆ ನಡೆಯಿತು.ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಶರೀಫ್ ಕೊಡಗು ಸ್ವಾಗತಿಸಿ, ಕೊನೆಗೆ ವಂದಿಸಿದರು.