ಪುತ್ತೂರು: ನೂತನವಾದ, ರಾಜಕೀಯ ಅರಾಜಕತೆ, ಮಾದಕ ದೃವ್ಯಗಳ ಉಪಯೋಗ ಹಾಗೂ ಮದುವೆ ಕಾರ್ಯಕ್ರಮಗಳಲ್ಲಿ ನಡೆಯುವ ಅನಾಚಾರಗಳ ವಿರುದ್ಧ ಜನ ಜಾಗೃತಿ ಮೂಡಿಸಲು ಇಜ್ತಿನಾಬ್-90 ಕಾರ್ಯಕ್ರಮ ಹಾಗೂ ತಾಜುಶ್ಶರೀಅ ಅನುಸ್ಮರಣೆ ಈಶ್ವರಮಂಗಲ ತ್ವಯಿಬಾ ಸಂಸ್ಥೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಇಸ್ಮಾಯಿಲ್ ಸಖಾಫಿ ಕರ್ನೂರ್ ರವರು ಉದ್ಘಾಟಿಸಿದರು. ಎಸ್ ವೈ ಎಸ್ ಈಶ್ವರಮಂಗಲ ಸೆಂಟರ್ ಅಧ್ಯಕ್ಷರು ಅಬ್ದುಲ್ ಜಲೀಲ್ ಸಖಾಫಿ ಕರ್ನೂರ್ ರವರು ಅಧ್ಯಕ್ಷತೆ ವಹಿಸಿದರು. ಅಬ್ದುಲ್ ಕರೀಂ ಮಾಸ್ಟರ್ ದರ್ಬಾರುಕಟ್ಟೆಯವರು ವಿಷಯ ಮಂಡನೆ ಮಾಡಿದರು. ಅಬ್ದುಲ್ ಅಝೀಝ್ ಮಿಸ್ಬಾಹಿ ಯವರು ಅನುಸ್ಮರಣಾ ಪ್ರಭಾಷಣ ಮಾಡಿದರು. ಹಂಝ ಮುಸ್ಲಿಯಾರ್ ಈಶ್ವರಮಂಗಲ, ಮುಹಮ್ಮದ್ ಮದನಿ ಭಾಷಣ ಮಾಡಿದರು.
ಕರ್ನಾಟಕ ಮುಸ್ಲಿಂ ಜಮಾಅತ್ ಈಶ್ವರಮಂಗಲ ವಲಯ ನಾಯಕರು ಎಸ್ ಎಸ್ ಎಫ್ ಈಶ್ವರಮಂಗಲ ಸೆಕ್ಟರ್ ನಾಯಕರು ಹಾಗೂ ಎಸ್ ವೈ ಎಸ್ ಹತ್ತು ಬ್ರಾಂಚ್ ಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಎಸ್ ವೈ ಎಸ್ ದಕ ಈಸ್ಟ್ ಜಿಲ್ಲಾ ಸದಸ್ಯರು, ಈಶ್ವರಮಂಗಲ ಸೆಂಟರ್ ಉಸ್ತುವಾರಿಯೂ ಆದ ಸಿದ್ದೀಖ್ ಕಟ್ಚೆಕಾರ್ ರವರನ್ನು ಸಭೆಯಲ್ಲಿ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಎಸ್ ವೈ ಎಸ್ ಈಶ್ವರಮಂಗಲ ಸೆಂಟರ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಕೊಯಿಲ
ಸ್ವಾಗತಿಸಿ ಉಮರ್ ಸಅದಿ ವಂದಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ತಬರ್ರುಕ್ ವಿತರಣೆ ವಿತರಿಸಲಾತಿತು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ