ಮಂಗಳೂರು: ಇಲ್ಲಿನ ಬಜಪೆ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಧ್ಯರಾತ್ರಿ ಲ್ಯಾಂಡ್ ಆಗಬೇಕಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಹವಾಮಾನ ವೈಪರೀತ್ಯದ ಕಾರಣದಿಂದ ಕೊಚ್ಚಿಯಲ್ಲಿ ಇಳಿಯಿತು. ಇದರಿಂದ ಪ್ರಯಾಣಿಕರು ಪರದಾಟ ನಡೆಸಬೇಕಾದ ಪ್ರಸಂಗ ಎದುರಾಯಿತು.
ದುಬೈನಿಂದ ಮಂಗಳೂರಿಗೆ 118 ಪ್ರಯಾಣಿಕರನ್ನು ಹೊತ್ತು ಏರ್ ಇಂಡಿಯಾ 1XE 384 ವಿಮಾನ ಹೊರಟಿತ್ತು. ಮಧ್ಯರಾತ್ರಿ 12:30 ಕ್ಕೆ ಸಮಯದಲ್ಲಿ ಬಜಪೆ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿತ್ತು. ಆದರೆ ಮಂಗಳೂರಿನಲ್ಲಿ ಸಿಡಿಲು ಮಳೆಯಾಗುತ್ತಿದ್ದ ಕಾರಣ ಲ್ಯಾಂಡ್ ಮಾಡಲಾಗದೆ ಕೊಚ್ಚಿಗೆ ತೆರಳಿತ್ತು.
ತಡರಾತ್ರಿ ಏಕಾಏಕಿ ಕೊಚ್ಚಿಯಲ್ಲಿ ಲ್ಯಾಂಡ್ ನಿಂದ ಪ್ರಯಾಣಿಕರು ಪರದಾಟ ನಡೆಸುವಂತಾಯಿತು. ಅರ್ಧಗಂಟೆಯಲ್ಲಿ ಪುನ: ಮಂಗಳೂರಿಗೆ ತೆರಳುವುದೆಂದು ಸಿಬ್ಬಂದಿಗಳು ಪ್ರಯಾಣಿಕರನ್ನು ವಿಮಾನದಲ್ಲಿ ಕುಳ್ಳಿರಿಸಿದ್ದರು. ಆದರೆ ಮುಂಜಾನೆಯಾದರೂ ಮಂಗಳೂರಿಗೆ ಪ್ರಯಾಣ ಬೆಳಸದೇ ಪ್ರಯಾಣಿಕರು ಸಂಕಷ್ಟ ಅನುಭವಿಸಿದರು.
ರಾತ್ರಿಯಿಡೀ ಊಟ ನಿದ್ದೆಯಿಲ್ಲದೇ ಪ್ರಯಾಣಿಕರು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಸಮಯ ಕಳೆಯಬೇಕಾದ ಪರಿಸ್ಥಿತಿ ಎದುರಾಗಿತ್ತು. ಇಂದು ಮತ್ತೆ ಕೊಚ್ಚಿಯಿಂದ ಮಂಗಳೂರಿಗೆ ವಿಮಾನ ಬಂದಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ