ಬೆಂಗಳೂರು: ಜನರಿದ್ದರೆ ರಾಜ್ಯ, ಜನರಿದ್ದರೆ ಮಾತ್ರ ಆರ್ಥಿಕತೆ. ಮೊದಲು ಜನರನ್ನ ಉಳಿಸಿಕೊಳ್ಳುವ ಕೆಲಸ ಮಾಡಬೇಕು. ಜನರ ಜೀವದ ಜೊತೆ ಕೇಂದ್ರ ಸರ್ಕಾರ ಚೆಲ್ಲಾಟವಾಡ್ತಿವೆ. ಗಂಟೆ ಹೊಡೆಯಿರಿ ಅಂದ್ರು ಗಂಟೆ ಹೊಡೆದ್ವಿ. ದೀಪಹಚ್ಚಿ ಅಂದ್ರು ದೀಪಹಚ್ಚಿದ್ದೆವು. ಚಪ್ಪಾಳೆ ಹೊಡೆಯಿರಿ ಅಂದ್ರು ಚಪ್ಪಾಳೆಯನ್ನೂಹೊಡೆದ್ವಿ. ಲಾಕ್ಡೌನ್ ಮಾಡಿದ್ರು ಫಾಲೋ ಮಾಡಿದ್ವಿ. ಇಷ್ಟೆಲ್ಲಾ ಮಾಡಿದ್ರೂ ಕೊರೊನಾ ನಿಯಂತ್ರಣ ಮಾಡೋಕೆ ಆಗ್ತಿಲ್ಲ.
ಒಂದು ವರ್ಷ ಸರ್ಕಾರಕ್ಕೆ ಸಹಕಾರ ಕೊಟ್ಟಿದ್ದೇವೆ. ಈಗ ಕೈಮೀರಿ ಹೋಗಿದೆ ಅಂತ ಆರೋಗ್ಯ ಸಚಿವರು ಹೇಳ್ತಿದ್ದಾರೆ. ಇವತ್ತಿನ ಪರಿಸ್ಥಿತಿ ನೆನೆದರೆ ಏನಾಗಬೇಡ. ಸರ್ಕಾರ ಇದ್ಯೋ ಇಲ್ವೋ ಗೊತ್ತಾಗ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರಕ್ಕೆ ಯಾವುದೇ ಫ್ಲಾನ್ ಇಲ್ಲ. ಸಾವಿರ ಬೆಡ್ ಮಾಡಿದ್ರು. ಹೊಟೇಲ್ ವಶಕ್ಕೆ ಪಡೆದ್ರು,ಆದ್ರೂ ಬೆಡ್ ಇಲ್ಲ. ಅತೀ ಹೆಚ್ಚು ಆಸ್ಪತ್ರೆ ನಮ್ಮ ರಾಜ್ಯದಲ್ಲಿವೆ. ದೇಶದಲ್ಲೇ ತಜ್ಞ ವೈದ್ಯರು ನಮ್ಮಲ್ಲಿದ್ದಾರೆ. ಆದರೂ ಸರ್ಕಾರ ಕೈಚೆಲ್ಲಿ ಕೂತಿದೆ. ಆಸ್ಪತ್ರೆಗಳಲ್ಲಿ ಹಾಸಿಗೆಗಳು ಸಿಗ್ತಿಲ್ಲ. ಅಧಿಕಾರಿಗಳು ಏನು ಮಾಡ್ತಿದ್ದಾರೆ. ಆಸ್ಪತ್ರೆಗಳಿಗೆ ಎಷ್ಟು ಅಧಿಕಾರಿಗಳು ಭೇಟಿ ಮಾಡಿದ್ದಾರೆ. ಸಚಿವರು ರಾಜ್ಯದ ಎಷ್ಟು ಕಡೆ ಭೇಟಿ ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಇನ್ನು ಕೊರೊನಾ ಆರ್ಥಿಕ ಸಮಸ್ಯೆ ಬಗೆ ಹರಿಸಲು ₹20 ಲಕ್ಷ ಕೋಟಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಇಲ್ಲಿಯವರೆಗೆ ಯಾರಿಗೆ ಆ ಹಣ ಸಿಕ್ಕಿದೆ..? ಜಿಮ್ಗಳು ನಿಂತುಹೋಗಿವೆ. ವ್ಯಾಪಾರ ಬಿದ್ದುಹೋಗ್ತಿದೆ. ಜಿಎಸ್ಟಿ ಕಟ್ಟುವ ದುಡ್ಡಿಗೂ ಪೆನಾಲ್ಟಿ ಹಾಕ್ತಿದ್ದಾರೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗಿದೆ. ಸಿಮೆಂಟ್,ಗೊಬ್ಬರದ ಬೆಲೆ ಗಗನಕ್ಕೆ ಹೋಗಿದೆ. ರೈತರು ಇವತ್ತು ಪರದಾಡುತ್ತಿದ್ದಾರೆ. ಹೆಣ್ಣುಮಕ್ಕಳು ಉದ್ಯೋಗ ಕಳೆದುಕೊಂಡಿದ್ದಾರೆ. ಅವರಿಗೆ ಯಾವ ಸಹಾಯಧನ ಸರ್ಕಾರ ನೀಡ್ತಿದೆ..? ಚಾಲಕರಿಗೆ ಸರ್ಕಾರದಿಂದ ನಯಾ ಪೈಸೆ ಸಹಾಯ ಮಾಡಿಲ್ಲ ಎಂದು ಆರೋಪಿಸಿದರು.
ಸರ್ಕಾರ ಜನರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಬೇಕು. ಸರಿಯಾದ ಮಾರ್ಗಸೂಚಿಗಳನ್ನ ತರಬೇಕು. ಶಿಕ್ಷಣ ವಿಚಾರದಲ್ಲಿ ಹೆಚ್ಚಿನ ಗಮನಹರಿಸಬೇಕು. ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಇಲಾಖೆಗಳ ಅಧಿಕಾರಿಗಳನ್ನ ಬಳಸಿಕೊಳ್ಳ ಬೇಕು. ಅಭಿವೃದ್ಧಿ ಕೆಲಸ ನಿಲ್ಲಿಸಿ,ಆರೋಗ್ಯಕ್ಕೆ ಒತ್ತು ಕೊಡಿ. ಕೊರೊನಾ ನಿಯಂತ್ರಣಕ್ಕೆ ಸದ್ಯ 300 ಕೋಟಿ ಹಣ ಮೀಸಲಿಡಿ ಎಂದು ಒತ್ತಾಯಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ