ಬೆಳ್ತಂಗಡಿ: ಸುನ್ನೀ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ರೀಜನಲ್ ಹಾಗೂ ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ ಬೆಳ್ತಂಗಡಿ ರೇಂಜ್ ಜಂಟಿ ಆಶ್ರಯದಲ್ಲಿ, ಇತ್ತೀಚೆಗೆ ನಮ್ಮನ್ನಗಲಿದ ಸಮಸ್ತ ಉಪಾಧ್ಯಕ್ಷರಾದ ತಾಜುಶ್ಶರೀಅ ಶೈಖುನಾ ಅಲೀಕುಂಞಿ ಉಸ್ತಾದ್ (ನ.ಮ) ಅನುಸ್ಮರಣೆ ಹಾಗೂ ರೇಂಜ್ ವ್ಯಾಪ್ತಿಯ ಮದ್ರಸಾಗಳ 34 ಅಧ್ಯಾಪಕರಿಗೆ ರಮಳಾನ್ ಕಿಟ್, ಆಹಾರ ಸಾಮಗ್ರಿಗಳ ವಿತರಣಾ ಕಾರ್ಯಕ್ರಮವು ಗುರುವಾಯನಕೆರೆ ಇಹ್ಯಾವುಲ್ ಇಸ್ಲಾಂ ಮದರಸದಲ್ಲಿ ನಡೆಯಿತು.

ಎಸ್.ಎಂ.ಎ ಅಧ್ಯಕ್ಷರಾದ ಅಬ್ದುಲ್ ಲತೀಫ್ ಹಾಜಿ ಎಸ್.ಎಂ.ಎಸ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು, ಗುರುವಾಯನಕೆರೆ ಅಧ್ಯಕ್ಷರಾದ ಯಾಕೂಬ್ ಮುಸ್ಲಿಯಾರ್ ಗುರುವಾಯನಕೆರೆ ಉದ್ಘಾಟಿಸಿದರು. ಸ್ಥಳೀಯ ಮುದರ್ರಿಸರಾದ ಆದಂ ಅಹ್ಸನಿ ತುರ್ಕಳಿಕೆ ಅನುಸ್ಮರಣಾ ಮಜ್ಲಿಸ್ ಗೆ ನೇತೃತ್ವ ವಹಿಸಿದ್ದರು. ರೇಂಜ್ ಅಧ್ಯಕ್ಷರಾದ ಉಮರುಲ್ ಫಾರೂಕ್ ಸಖಾಫಿ ಪರಪ್ಪು, ಉಪಾಧ್ಯಕ್ಷರಾದ ಝಾಕಿರ್ ಹುಸೈನ್ ಕಣಿಯೂರು ಮೊದಲಾದವರು ಶುಭ ಹಾರೈಸಿದರು. ಇದೇ ವೇಳೆ ಯಾಕೂಬ್ ಮುಸ್ಲಿಯಾರ್, ಎನ್ ಎಂ ಶರೀಫ್ ಸಖಾಫಿ, ಝಾಕಿರ್ ಹುಸೈನ್ ರವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಉಪಾಧ್ಯಕ್ಷರಾದ ಅಬೂಬಕರ್ ಬದ್ಯಾರ್, ಮುಹಮ್ಮದ್ ಗೋವಿಂದೂರು, ಕಾರ್ಯದರ್ಶಿಗಳಾದ ಹಾರಿಸ್ ಕುಕ್ಕುಡಿ, ಹೈದರ್ ಸರ್ ಮನ್ಶರ್, ನಝೀರ್ ಎರುಕಡಪು ಮೊದಲಾದವರು ಉಪಸ್ಥಿತರಿದ್ದರು.
ಎಸ್.ಎಂ.ಎ ಹಾಗೂ ಎಸ್.ಜೆ.ಎಂ ಪ್ರಧಾನ ಕಾರ್ಯದರ್ಶಿ ಎನ್ ಎಂ ಶರೀಫ್ ಸಖಾಫಿ ನೆಕ್ಕಿಲ್ ಸ್ವಾಗತಿಸಿದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ