ಲಕ್ನೋ,ಏ.19: ಉತ್ತರ ಪ್ರದೇಶದಲ್ಲಿ ಕೊರೋನಾ ಎರಡನೇ ಅಲೆ ತೀವ್ರಗೊಂಡಿದ್ದು, ಸೋಂಕಿನ ಸಂಖ್ಯೆ ಹೆಚ್ಚುತ್ತಿದೆ. ಈ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅಲಹಾಬಾದ್ ಹೈ ಕೋರ್ಟ್ ಪ್ರಯಾಗ್ ರಾಜ್, ಲಕ್ನೋ, ವಾರಣಾಸಿ, ಕಾನ್ಫುರ ಮತ್ತು ಗೋರಖ್ಪುರದಲ್ಲಿ ಲಾಕ್ಡೌನ್ ಮಾಡುವಂತೆ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಸೂಚನೆ ನೀಡಿದೆ. ಏ. 26ರವರೆಗೆ ಎಲ್ಲಾ ಶಾಪಿಂಗ್ ಮಾಲ್, ಕಾಂಪ್ಲೆಕ್ಸ್, ರೆಸ್ಟೋರೆಂಟ್, ಹೋಟೆಲ್, ತರಕಾರಿ ಅಂಗಡಿ ಮತ್ತು ಕಮರ್ಷಿಯಲ್ ಶಾಪ್ಗಳನ್ನು ಮುಚ್ಚುವಂತೆ ತಿಳಿಸಿದೆ.
ಇಂದು ರಾತ್ರಿಯಿಂದಲೇ ಈ ಲಾಕ್ಡೌನ್ ಜಾರಿಗೆ ಬರಲಿದೆ. ಇಂತಹ ಸಮಯದಲ್ಲಿ ಸಾರ್ವಜನಿಕ ಓಡಾಟವನ್ನು ಪರೀಕ್ಷಿಸದಿರಲು ಜನಪ್ರಿಯ ಸರ್ಕಾರಕ್ಕೆ ರಾಜಕೀಯ ಒತ್ತಡಗಳಿದ್ದರೆ ನಾವು ಮೂಕ ಪ್ರೇಕ್ಷಕರಾಗಿ ಉಳಿಯಲು ಸಾಧ್ಯವಿಲ್ಲ. ಇಂತಹ ಸಂದರ್ಭದಲ್ಲಿ ನಾವು ಕೂಡ ಸುಮ್ಮನೆ ಕೂರಲು ಸಾಧ್ಯವಾಗುವುದಿಲ್ಲ. ಸಾರ್ವಜನಿಕರ ಆರೋಗ್ಯ ನಮ್ಮ ಮೊದಲ ಆದ್ಯತೆ. ಕೆಲವರು ನಿರ್ಲಕ್ಷ್ಯದಿಂದಾಗಿ ಸೋಂಕು ಹರಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಜನರನ್ನು ರಕ್ಷಿಸುವುದು ಸಾಂವಿಧಾನಿಕ ಕರ್ತವ್ಯದಿಂದ ನಾವು ದೂರ ಉಳಿಯಲು ಸಾಧ್ಯವಿಲ್ಲ ಎಂದು ಕೋರ್ಟ್ ತಿಳಿಸಿದೆ.
ಇಂದು ರಾತ್ರಿಯಿಂದ ಅಗತ್ಯ ಸೇವೆಗಳನ್ನು ಹೊರತು ಪಡಿಸಿ ಎಲ್ಲಾ ಸರ್ಕಾರಿ ಮತ್ತು ಸಾರ್ವಜನಿಕ ಸಂಸ್ಥೆಗಳು ಬಂದ್ ಆಗಲಿದೆ. ಈ ವೇಳೆ ಹಣಕಾಸು ಸಂಸ್ಥೆಗಳು ಮತ್ತು ಹಣಕಾಸು ಇಲಾಖೆ, ವೈದ್ಯಕೀಯ ಮತ್ತು ಹೆಲ್ತ್ ಕೇರ್ ಸರ್ವೀಸ್, ಕೈಗಾರಿಕಾ ಮತ್ತು ವೈಜ್ಞಾನಿಕ ಸಂಸ್ಥೆಗಳು, ಪುರಸಭೆಯ ಕಾರ್ಯಗಳಯ ಮತ್ತು ಸಾರಿಗೆ ಸೇವೆ ಸಿಗಲಿದೆ.
ಪ್ರಯಾಗ್ರಾಜ್, ಲಕ್ನೋ, ವಾರಾಣಾಸಿ, ಕಾನ್ಫುರ್ ಮತ್ತು ಗೋರಾಖ್ಪುರ ನಗರಗಳಲ್ಲಿ ಕಟ್ಟು ನಿಟ್ಟಿನ ಕ್ರಮ ಜಾರಿಗೆ ತರುವಂತೆ ಹೈ ಕೋರ್ಟ್ ನಿರ್ದೇಶನ ಮಾಡಿದೆ.
ಇದೇ ವೇಳ ವಿವಿಐಪಿ ಶಿಫಾರಸಿನ ಚಿಕಿತ್ಸೆ ಕುರಿತು ಹೈಕೋರ್ಟ್ ಚಾಟಿ ಬೀಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವಿಐಟಿ ಶಿಫಾರಸಿನ ಅನ್ವಯ ರೋಗಿಗಳನ್ನು ಆಡ್ಮಿಟ್ ಮಾಡಲಾಗುತ್ತಿದೆ. ಜೊತೆಗೆ ಆಂಟಿ ವೈರಸ್ ರೆಮಿಡಿಸಿವರ್ ಔಷಧಿ ನೀಡಲು ಕೂಡ ಪ್ರಮುಖ ವ್ಯಕ್ತಿಗಳ ಶಿಫಾರಸು ಅಗತ್ಯ ವಾಗಿದೆ ಎಂಬುದು ತಿಳಿದುಬಂದಿದೆ. ವಿವಿಐಪಿಗಳು 12 ಗಂಟೆಯಲ್ಲಿ ಆರ್ಟಿ ಪಿಸಿಆರ್ ಪರೀಕ್ಷಾ ವರದಿ ಪಡೆದರೆ, ಸಾಮಾನ್ಯ ಜನರಿಗೆ ಇದು ತಲುಪಲು ಎರಡ್ಮೂರು ದಿನಗಳವರೆಗೆ ಕಾಯಬೇಕಿದೆ. ಇದರಿಂದ ಸೋಂಕು ಕುಟುಂಬಸ್ಥರಿಗೂ ಹರಡುತ್ತಿದೆ ಎಂದಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ