ಕೋಝಿಕ್ಕೋಡ್| ಮಾನವೀಯ ನೆಲೆಯಲ್ಲಿ ಪತ್ರಕರ್ತ ಸಿದ್ದೀಕ್ ಕಾಪ್ಪನ್ ಅವರ ಆರೋಗ್ಯವನ್ನು ಸಂರಕ್ಷಿಸಲು ಮಧ್ಯಪ್ರವೇಶಿಸುವಂತೆ ಕೋರಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಅವರು ಪತ್ರ ಬರೆದಿದ್ದಾರೆ.
ಸಿದ್ದೀಕ್ ಕಾಪ್ಪನ್ ಪ್ರಸ್ತುತ ಉತ್ತರ ಪ್ರದೇಶದ ಮಥುರಾ ವೈದ್ಯಕೀಯ ಕಾಲೇಜಿನಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಕೋವಿಡ್ ಮತ್ತು ಇತರ ಕಾಯಿಲೆಗಳಿಂದಾಗಿ ಆರೋಗ್ಯದ ಸ್ಥಿತಿ ಶೋಚನೀಯವಾಗಿದೆ ಎಂದು ಮಾಧ್ಯಮ ವರದಿಗಳಿಂದ ತಿಳಿದು ಬಂದಿದೆ.
ಅವರಿಗೆ ಮೂಲಭೂತ ಮಾನವ ಹಕ್ಕುಗಳನ್ನು ನಿರಾಕರಿಸಲಾಗಿದೆ, ಕೈಕೋಳದಲ್ಲಿ ಬಂಧಿಸಲಾಗಿದ್ದು, ಸ್ನಾನಗೃಹಕ್ಕೆ ಹೋಗಲು ಕೂಡ ಸಾಧ್ಯವಾಗದೆ ಬಹುದಿನಗಳಿಂದ ನರಕಯಾತನೆಯನ್ನು ಅನುಭವಿಸುತ್ತಿದ್ದಾರೆ.
ಆದ್ದರಿಂದ,ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಅಗತ್ಯವಿದ್ದಲ್ಲಿ, ಉತ್ತಮ ಚಿಕಿತ್ಸೆಗಾಗಿ ಅವರನ್ನು ನವದೆಹಲಿಯ ಏಮ್ಸ್ ಅಥವಾ ಕೇರಳಕ್ಕೆ ವರ್ಗಾಯಿಸಲು ಪ್ರಯತ್ನಿಸುವಂತೆ ಪತ್ರದಲ್ಲಿ ಆಗ್ರಹಿಸಿದ್ದಾರೆ.
2020 ರ ಅಕ್ಟೋಬರ್ 5 ರಂದು ಸಿದ್ದೀಕ್ ಕಾಪ್ಪನ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು, ಪ್ರಬಲ ಜಾತಿಯ ನಾಲ್ಕು ಮಂದಿಯಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಸಾವನ್ನಪ್ಪಿದ 19 ವರ್ಷದ ದಲಿತ ಯುವತಿಯ ಕುಟುಂಬವನ್ನು ಭೇಟಿಯಾಗಲು ಹಥ್ರಾಸ್ಗೆ ತೆರಳುತ್ತಿದ್ದಾಗ, ಕಠಿಣ ಕಾನೂನುಬಾಹಿರ ಚಟುವಟಿಕೆಗಳ ಕಾಯ್ದೆ ಅಥವಾ ಯುಎಪಿಎ ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಯೊಂದಿಗೆ ಪತ್ರಕರ್ತ ಸಂಪರ್ಕ ಹೊಂದಿದ್ದಾನೆ ಎಂದು ಉತ್ತರ ಪ್ರದೇಶ ಪೊಲೀಸರು ಆರೋಪಿಸಿದ್ದಾರೆ. ಅವರನ್ನು ಬಂಧಿಸಿದಾಗಿನಿಂದ ಮಥುರಾದ ಜೈಲಿನಲ್ಲಿ ಇರಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ