ಚೆನ್ನೈ: ದೇಶದಲ್ಲಿ ಕೋವಿಡ್ –19 ಎರಡನೇ ಅಲೆಯು ಇಷ್ಟೊಂದು ವೇಗವಾಗಿ ಹಬ್ಬಲು ಚುನಾವಣಾ ಆಯೋಗವೇ ಏಕೈಕ ಕಾರಣ ಎಂದು ಮದ್ರಾಸ್ ಹೈಕೋರ್ಟ್ ಸೋಮವಾರ ತರಾಟೆಗೆ ತೆಗೆದುಕೊಂಡಿದೆ. ಚುನಾವಣಾ ಆಯೋಗವು ಇತ್ತೀಚೆಗೆ ‘ಅತ್ಯಂತ ಬೇಜವಾಬ್ದಾರಿ ಸಂಸ್ಥೆ’ಯಾಗಿದೆ. ಅದರ ಅಧಿಕಾರಿಗಳ ವಿರುದ್ಧ ಕೊಲೆ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಳ್ಳಬಹುದು ಎಂದೂ ಹೇಳಿದೆ.
ರ್ಯಾಲಿ ಮತ್ತು ಸಭೆಗಳನ್ನು ನಡೆಸಲು ರಾಜಕೀಯ ಪಕ್ಷಗಳಿಗೆ ಅನುಮತಿ ನೀಡುವ ಮೂಲಕ ಸೋಂಕು ಹರಡಲು ಆಯೋಗವು ಕಾರಣವಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಬ್ಯಾನರ್ಜಿ ಅವರ ಪೀಠವು ಹೇಳಿದೆ. ಮೇ 2ರಂದು ಮತ ಎಣಿಕೆ ನಡೆಸುವಾಗ ಕೋವಿಡ್ ತಡೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ತಮಿಳುನಾಡಿನ ಸಾರಿಗೆ ಸಚಿವ ಮತ್ತು ಕರೂರ್ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ಎಂ.ಆರ್. ವಿಜಯಭಾಸ್ಕರ್ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಪೀಠವು ನಡೆಸಿತು.
ಎಣಿಕೆ ಕೇಂದ್ರದಲ್ಲಿ ಎಲ್ಲ ಮುನ್ನೆಚ್ಚರಿಕೆಯನ್ನೂ ವಹಿಸಲಾಗುವುದು ಎಂದು ಆಯೋಗದ ವಕೀಲರು ಹೇಳಿದ್ದು ಮುಖ್ಯ ನ್ಯಾಯಮೂರ್ತಿಯವರ ಆಕ್ರೋಶಕ್ಕೆ ಕಾರಣವಾಯಿತು. ‘ರ್ಯಾಲಿ ಮತ್ತು ಸಭೆಗಳು ನಡೆಯುವಾಗ ನೀವು ಈ ಲೋಕದಲ್ಲಿ ಇರಲಿಲ್ಲವೇ? ಸಾರ್ವಜನಿಕ ಆರೋಗ್ಯವೇ ಅತ್ಯಂತ ಮುಖ್ಯ. ಪ್ರಜಾಪ್ರಭುತ್ವವು ಖಾತರಿಪಡಿಸುವ ಹಕ್ಕುಗಳನ್ನು ಚಲಾಯಿಸಲು ವ್ಯಕ್ತಿಯು ಬದುಕಿದ್ದರೆ ಮಾತ್ರ ಸಾಧ್ಯ’ ಎಂದು ಪೀಠ ಹೇಳಿದೆ.
ಕೋವಿಡ್ ತಡೆ ಮಾರ್ಗಸೂಚಿ ಪಾಲನೆಗೆ ಸಂಬಂಧಿಸಿ ಕಲ್ಕತ್ತಾ ಹೈಕೋರ್ಟ್ ಕೂಡ ಆಯೋಗದ ನಡೆಯ ಬಗ್ಗೆ ಈ ಹಿಂದೆ ಅಸಮಾಧಾನ ವ್ಯಕ್ತಪಡಿಸಿತ್ತು. ಕೋವಿಡ್ ತಡೆಗೆ ಸುತ್ತೋಲೆ ಹೊರಡಿಸಿ, ಸಭೆಗಳನ್ನು ನಡೆಸಿದರೆ ಸಾಲದು ಎಂದು ಮುಖ್ಯನ್ಯಾಯಮೂರ್ತಿ ಟಿ.ಬಿ.ಎನ್. ರಾಧಾಕೃಷ್ಣನ್ ಹೇಳಿದ್ದರು.
‘ಎಣಿಕೆ ತಡೆಗೆ ಹಿಂಜರಿಯುವುದಿಲ್ಲ’
ಮತ ಎಣಿಕೆ ಕೇಂದ್ರಗಳಲ್ಲಿ ಕೋವಿಡ್ ತಡೆ ಮಾರ್ಗಸೂಚಿ ಪಾಲನೆಗೆ ಯಾವ ಯೋಜನೆ ರೂಪಿಸಲಾಗಿದೆ ಎಂಬುದನ್ನು ಶುಕ್ರವಾರದ ಒಳಗೆ ಕೋರ್ಟ್ಗೆ ತಿಳಿಸಬೇಕು. ಇಂತಹ ಯೋಜನೆ ಸಿದ್ಧವಾಗದೇ ಇದ್ದರೆ, ಮೇ 2ರಂದು ನಡೆಯಲಿರುವ ಮತ ಎಣಿಕೆಗೆ ತಡೆ ನೀಡಲು ಹಿಂಜರಿಯವುದಿಲ್ಲ ಎಂದೂ ಕೋರ್ಟ್ ಮೌಖಿಕ ಎಚ್ಚರಿಕೆ ನೀಡಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ