ನವದೆಹಲಿ: ಕೊರೊನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಭಾರತ ಪಡೆದ ವಿದೇಶಿ ನೆರವಿನಲ್ಲಿ ಪಾರದರ್ಶಕತೆ ಏಕಿಲ್ಲ ಎಂದು ಪ್ರಶ್ನಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದಿಂದ ಉತ್ತರವನ್ನು ಬಯಸಿದ್ದಾರೆ.
ಕೋವಿಡ್ ವಿದೇಶಿ ನೆರವಿಗೆ ಸಂಬಂಧಪಟ್ಟಂತೆ ರಾಹುಲ್ ಗಾಂಧಿ ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ‘ಭಾರತ ಯಾವೆಲ್ಲ ಸರಬರಾಜುಗಳನ್ನು ಗಿಟ್ಟಿಸಿಕೊಂಡಿದೆ? ಅದು ಎಲ್ಲಿದೆ? ಅದರಿಂದ ಯಾರು ಪ್ರಯೋಜನ ಪಡೆಯುತ್ತಿದ್ದಾರೆ? ಅವುಗಳನ್ನು ರಾಜ್ಯಗಳಿಗೆ ಹೇಗೆ ಹಂಚಲಾಗುತ್ತಿದೆ? ಪಾರದರ್ಶಕತೆ ಏಕಿಲ್ಲ? ಭಾರತ ಸರ್ಕಾರವೇ, ನಿಮ್ಮ ಬಳಿ ಉತ್ತರವಿದೆಯೇ’ ಎಂದು ರಾಹುಲ್ ಗಾಂಧಿ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.
ವಿದೇಶದಿಂದ ಗಿಟ್ಟಿಸಿದ ಕೋವಿಡ್ ನೆರವಿನ ಬಗ್ಗೆ ಕಾಂಗ್ರೆಸ್ ಪಾರದರ್ಶಕತೆಯನ್ನು ಬಯಸುತ್ತಿದೆ. ಅದನ್ನು ಎಲ್ಲಿಂದ ಮತ್ತು ಹೇಗೆ ಬಳಸಲಾಗಿದೆ ಎಂಬುದರ ಕುರಿತು ದೇಶದ ಜನತೆಗೆ ವಿವರವನ್ನು ನೀಡುವಂತೆ ಸರ್ಕಾರವನ್ನು ಬಯಸಿದೆ.
ಮಗದೊಂದು ಟ್ವೀಟ್ನಲ್ಲಿ ಕೋವಿಡ್ ಬಿಕ್ಕಟ್ಟನ್ನು ನಿಯಂತ್ರಿಸುವಲ್ಲಿ ಮತ್ತು ಜನರಿಗೆ ಉದ್ಯೋಗ ನೀಡುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವೈಫಲ್ಯವನ್ನು ಕಂಡಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
‘ಲಸಿಕೆ ಇಲ್ಲ, ಉದ್ಯೋಗವೂ ಇಲ್ಲ. ಜನರು ಕೊರೊನಾ ವೈರಸ್ ತೀವ್ರತೆಯನ್ನು ಎದುರಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಸಂಪೂರ್ಣ ವೈಫಲ್ಯವನ್ನು ಅನುಭವಿಸಿದೆ’ ಎಂದು ಆರೋಪಿಸಿದ್ದಾರೆ
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ