ನವದೆಹಲಿ: ಕೊರೊನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಭಾರತ ಪಡೆದ ವಿದೇಶಿ ನೆರವಿನಲ್ಲಿ ಪಾರದರ್ಶಕತೆ ಏಕಿಲ್ಲ ಎಂದು ಪ್ರಶ್ನಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದಿಂದ ಉತ್ತರವನ್ನು ಬಯಸಿದ್ದಾರೆ.
ಕೋವಿಡ್ ವಿದೇಶಿ ನೆರವಿಗೆ ಸಂಬಂಧಪಟ್ಟಂತೆ ರಾಹುಲ್ ಗಾಂಧಿ ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ‘ಭಾರತ ಯಾವೆಲ್ಲ ಸರಬರಾಜುಗಳನ್ನು ಗಿಟ್ಟಿಸಿಕೊಂಡಿದೆ? ಅದು ಎಲ್ಲಿದೆ? ಅದರಿಂದ ಯಾರು ಪ್ರಯೋಜನ ಪಡೆಯುತ್ತಿದ್ದಾರೆ? ಅವುಗಳನ್ನು ರಾಜ್ಯಗಳಿಗೆ ಹೇಗೆ ಹಂಚಲಾಗುತ್ತಿದೆ? ಪಾರದರ್ಶಕತೆ ಏಕಿಲ್ಲ? ಭಾರತ ಸರ್ಕಾರವೇ, ನಿಮ್ಮ ಬಳಿ ಉತ್ತರವಿದೆಯೇ’ ಎಂದು ರಾಹುಲ್ ಗಾಂಧಿ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.
ವಿದೇಶದಿಂದ ಗಿಟ್ಟಿಸಿದ ಕೋವಿಡ್ ನೆರವಿನ ಬಗ್ಗೆ ಕಾಂಗ್ರೆಸ್ ಪಾರದರ್ಶಕತೆಯನ್ನು ಬಯಸುತ್ತಿದೆ. ಅದನ್ನು ಎಲ್ಲಿಂದ ಮತ್ತು ಹೇಗೆ ಬಳಸಲಾಗಿದೆ ಎಂಬುದರ ಕುರಿತು ದೇಶದ ಜನತೆಗೆ ವಿವರವನ್ನು ನೀಡುವಂತೆ ಸರ್ಕಾರವನ್ನು ಬಯಸಿದೆ.
ಮಗದೊಂದು ಟ್ವೀಟ್ನಲ್ಲಿ ಕೋವಿಡ್ ಬಿಕ್ಕಟ್ಟನ್ನು ನಿಯಂತ್ರಿಸುವಲ್ಲಿ ಮತ್ತು ಜನರಿಗೆ ಉದ್ಯೋಗ ನೀಡುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವೈಫಲ್ಯವನ್ನು ಕಂಡಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
‘ಲಸಿಕೆ ಇಲ್ಲ, ಉದ್ಯೋಗವೂ ಇಲ್ಲ. ಜನರು ಕೊರೊನಾ ವೈರಸ್ ತೀವ್ರತೆಯನ್ನು ಎದುರಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಸಂಪೂರ್ಣ ವೈಫಲ್ಯವನ್ನು ಅನುಭವಿಸಿದೆ’ ಎಂದು ಆರೋಪಿಸಿದ್ದಾರೆ
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ