ಸೌದಿ ಅರೇಬಿಯಾ: ಅಲ್ ಕೋಬರ್ ನಲ್ಲಿ ಡೆಲ್ಮೊನ್ ಎಂಬ ಕಂಪನಿಯೊಂದರಲ್ಲಿ ಹಲವಾರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ ಕ್ರಷ್ಣಾಪುರ 7ನೇ ವಿಭಾಗದ ನಿವಾಸಿ ಅಬ್ದುಲ್ ರಹ್ಮಾನ್ ಮಾಮು ಎಂಬುವವರು ಹಲವು ತಿಂಗಳುಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು ಇವರು ತಾ: 29 ಎಪ್ರಿಲ್ ನಲ್ಲಿ ಅನಾರೋಗ್ಯದಿಂದ ಮರಣಹೊಂದಿರುತ್ತಾರೆ.

ಅನಾರೊಗ್ಯದಲ್ಲಿದ್ದ ಸಂದರ್ಭದಲ್ಲಿ ಹೆಚ್ಚಿನ ಚಿಕೆತ್ಸೆಗೆ ಊರಿಗೆ ತೆರಬೇಕಾಗಿತ್ತು ಆದರೆ ವಿಮಾನ ಸಂಪರ್ಕ ಸ್ಥಗಿತಗೊಂಡಿರುವ ಕಾರಣ ವಿದೇಶದಲ್ಲೆ ಹೆಚ್ಚಿನ ಚಿಕಿತ್ಸೆ ಮುಂದುವರಿಸಿದ್ದರು. ಪ್ರತ್ಯೇಕವಾಗಿ ಚಿಕಿತ್ಸೆಯ ಎಲ್ಲಾ ಖರ್ಚು ವೆಚ್ಚ ಕಂಪನಿಯ ವತಿಯಿಂದ ನೀಡಲಾಯಿತು. ಮ್ರತರು ಹೆಂಡತಿ ಹಾಗು ಎರಡು ಗಂಡು ಮಕ್ಕಳನ್ನು ಅಗಲಿದ್ದಾರೆ.
ಮರಣೋತ್ತರ ಕ್ರೀಯೆಗೆ ಬೇಕಾದ ವ್ಯವಸ್ಥೆ ಕಲ್ಪಿಸಲು ಕೂಡಲೆ ಸ್ಪಂದಿಸಿ ಕಾರ್ಯ ಪ್ರವರ್ತರಾದ ಕರ್ನಾಟಕ ಕಲ್ಚರಲ್ ಫೌಂಡೇಷನ್ ದಮ್ಮಾಮ್ ಝೋನ್ ಸಾಂತ್ವನ ತಂಡವು ಭಾರತೀಯ ರಾಯಬಾರಿ ಕಛೇರಿ ಹಾಗು ಊರಿನಿಂದ ಬೇಕಾದ ದಾಖಲೆ ಪತ್ರವನ್ನು ತ್ವರಿತ ವೇಗದಲ್ಲಿ ಸರಿಪಡಿಸಿ ಅಂದರೆ ತಾ: ಮೇ 3ರಂದು ಅಸರ್ ನಮಾಜಿನ ಬಳಿಕ ಅಲ್ ಕೋಬರ್ ನಲ್ಲಿ ದಫನ ಕಾರ್ಯ ನಿರ್ವಹಿಸಲಾಯಿತು.
ಈ ಒಂದು ಉತ್ತಮ ಕಾರ್ಯದಲ್ಲಿ ಕೆ.ಸಿ.ಎಫ್ ನೊಂದಿಗೆ ಸಹಕರಿಸಿದ ಮ್ರತರ ಕಂಪನಿಯವರಾದ ಉಸ್ಮಾನ್ ಮಂಗಳೂರು ಹಾಗು ಝೋನ್ ಸಾಂತ್ವನ ಕನ್ವೀನರ್ ಬಾಷಾ ಗಂಗಾವಲಿ, ತಮೀಮ್ ಕೂಳೂರು ಇವರುಗಳಿಗೆ ಅಭಿನಂದನೆ ಸಲ್ಲಿಸುತ್ತಿದ್ದೇವೆ. ಮ್ರತರ ಕುಟುಂಬದವರು, ಗೆಳೆಯರು ಹಾಗು ಕೆ.ಸಿ.ಎಫ್ ನಾಯಕರು ಅಂತ್ಯಕ್ರೀಯೆಯಲ್ಲಿ ಭಾಗಯಾಗಿ ಮ್ರತರಿಗಾಗಿ ದುಆ ನೆರೆವೇರಿಸಲಾಯಿತು.
ಬಾಂಗ್ಲದೇಶದ ವ್ಯಕ್ತಿಯ ದಫನ ಕಾರ್ಯದಲ್ಲೂ ಸಹಕಾರ
ಇದೇ ಸಂಧರ್ಭದಲ್ಲಿ ಮತ್ತೊಂದು ಕಡೆಯಿಂದ ಬೇರೊಂದು ರಾಷ್ಟ್ರದ ಅಂದರೆ ಬಾಂಗ್ಲದೇಶದ ವ್ಯಕ್ತಿಯ ದಫನ ಕಾರ್ಯಕ್ಕೆ ಸಹಕಾರ ಕೋರಿ ಬಂದಾಗ ಅದನ್ನೂ ಸಹ ಕೈಗೆತ್ತಿಕೊಂಡ ಕೆ.ಸಿ.ಎಫ್ ಸಾಂತ್ವನ ತಂಡವು ಬೇಕಾದ ಎಲ್ಲಾ ವ್ಯವಸ್ಥೆಯನ್ನು ಕಲ್ಪಿಸಿ ಲುಹರ್ ನಮಾಜಿನ ಬಳಿಕ ದಮ್ಮಾಮ್ 91 ರಲ್ಲಿ ದಫನ ಕಾರ್ಯ ನೆರೆವೇರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್