ಜೆರುಸಲೆಂ: ಗಾಜಾದಲ್ಲಿ ಹತ್ಯಾಕಾಂಡ ಮುಂದುವರಿಸಿದ ಇಸ್ರೇಲ್. ಇಂದು, ಗಾಜಾ ಪ್ರದೇಶದ ಶಾತಿಅ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಎಂಟು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ಹತ್ತು ಜನರು ಮೃತಪಟ್ಟಿದ್ದಾರೆ. ಕೊಲ್ಲಲ್ಪಟ್ಟವರೆಲ್ಲರೂ ಒಂದೇ ಕುಟುಂಬದ ಸದಸ್ಯರು.
ಯಾವುದೇ ಪ್ರಚೋದನೆಯಿಲ್ಲದೆ ಇಸ್ರೇಲಿ ವೈಮಾನಿಕ ದಾಳಿಯು ಮುಂಜಾನೆ ಈ ಪ್ರದೇಶವನ್ನು ಅಪ್ಪಳಿಸಿತು. ದಾಳಿಯ ನಂತರ ಕಟ್ಟಡಗಳ ಅವಶೇಷಗಳನ್ನು ಪರೀಕ್ಷಿಸುವಾಗ ಮಕ್ಕಳು ಸೇರಿದಂತೆ 10 ಜನರ ಮೃತ ಶರೀರವನ್ನು ರಕ್ಷಕರು ಪತ್ತೆ ಮಾಡಿದ್ದಾರೆ. ಹೆಚ್ಚಿನ ಜನರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರಬಹುದೆಂದು ಅವರು ಶಂಕೆ ವ್ಯಕ್ತಪಡಿಸಿದ್ದಾರೆ.
ಘಟನೆಯಲ್ಲಿ ಚಿಕ್ಕ ಮಗು ಸೇರಿದಂತೆ ಹದಿನೈದು ಜನರು ಗಾಯಗೊಂಡಿದ್ದಾರೆ. ಅಂತರರಾಷ್ಟ್ರೀಯ ಸಮುದಾಯದ ತೀವ್ರ ವಿರೋಧದ ಹೊರತಾಗಿಯೂ ಗಾಜಾ ವಿರುದ್ಧ ಇಸ್ರೇಲಿ ಆಕ್ರಮಣ ಸತತ ಆರನೇ ದಿನವೂ ಮುಂದುವರೆದಿದೆ. ಇಂದಿನ ಇಸ್ರೇಲಿ ದಾಳಿಯೊಂದಿಗೆ 39 ಮಕ್ಕಳು ಸಮೇತ ಮರಣ ಸಂಖ್ಯೆ 140 ಕ್ಕೆ ಏರಿದೆ. ಶಾತಿಅ್ ಗಾಜಾ ಪ್ರದೇಶದ ಮೂರನೇ ಅತಿದೊಡ್ಡ ನಿರಾಶ್ರಿತರ ಶಿಬಿರವಾಗಿದೆ. ಇದು ಅತ್ಯಂತ ಜನನಿಬಿಡ ಪ್ರದೇಶವಾಗಿದೆ. ಕೇವಲ 0.52 ಚದರ ಕಿಲೋಮೀಟರ್ ವಿಸ್ತೀರ್ಣವುಳ್ಳ ಇದು ಸುಮಾರು 85,000 ಪ್ಯಾಲೇಸ್ಟಿನಿಯನ್ ನಿರಾಶ್ರಿತರಿಗೆ ನೆಲೆಯಾಗಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್