ಜೆರುಸಲೆಂ: ಗಾಜಾದಲ್ಲಿ ಹತ್ಯಾಕಾಂಡ ಮುಂದುವರಿಸಿದ ಇಸ್ರೇಲ್. ಇಂದು, ಗಾಜಾ ಪ್ರದೇಶದ ಶಾತಿಅ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಎಂಟು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ಹತ್ತು ಜನರು ಮೃತಪಟ್ಟಿದ್ದಾರೆ. ಕೊಲ್ಲಲ್ಪಟ್ಟವರೆಲ್ಲರೂ ಒಂದೇ ಕುಟುಂಬದ ಸದಸ್ಯರು.
ಯಾವುದೇ ಪ್ರಚೋದನೆಯಿಲ್ಲದೆ ಇಸ್ರೇಲಿ ವೈಮಾನಿಕ ದಾಳಿಯು ಮುಂಜಾನೆ ಈ ಪ್ರದೇಶವನ್ನು ಅಪ್ಪಳಿಸಿತು. ದಾಳಿಯ ನಂತರ ಕಟ್ಟಡಗಳ ಅವಶೇಷಗಳನ್ನು ಪರೀಕ್ಷಿಸುವಾಗ ಮಕ್ಕಳು ಸೇರಿದಂತೆ 10 ಜನರ ಮೃತ ಶರೀರವನ್ನು ರಕ್ಷಕರು ಪತ್ತೆ ಮಾಡಿದ್ದಾರೆ. ಹೆಚ್ಚಿನ ಜನರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರಬಹುದೆಂದು ಅವರು ಶಂಕೆ ವ್ಯಕ್ತಪಡಿಸಿದ್ದಾರೆ.
ಘಟನೆಯಲ್ಲಿ ಚಿಕ್ಕ ಮಗು ಸೇರಿದಂತೆ ಹದಿನೈದು ಜನರು ಗಾಯಗೊಂಡಿದ್ದಾರೆ. ಅಂತರರಾಷ್ಟ್ರೀಯ ಸಮುದಾಯದ ತೀವ್ರ ವಿರೋಧದ ಹೊರತಾಗಿಯೂ ಗಾಜಾ ವಿರುದ್ಧ ಇಸ್ರೇಲಿ ಆಕ್ರಮಣ ಸತತ ಆರನೇ ದಿನವೂ ಮುಂದುವರೆದಿದೆ. ಇಂದಿನ ಇಸ್ರೇಲಿ ದಾಳಿಯೊಂದಿಗೆ 39 ಮಕ್ಕಳು ಸಮೇತ ಮರಣ ಸಂಖ್ಯೆ 140 ಕ್ಕೆ ಏರಿದೆ. ಶಾತಿಅ್ ಗಾಜಾ ಪ್ರದೇಶದ ಮೂರನೇ ಅತಿದೊಡ್ಡ ನಿರಾಶ್ರಿತರ ಶಿಬಿರವಾಗಿದೆ. ಇದು ಅತ್ಯಂತ ಜನನಿಬಿಡ ಪ್ರದೇಶವಾಗಿದೆ. ಕೇವಲ 0.52 ಚದರ ಕಿಲೋಮೀಟರ್ ವಿಸ್ತೀರ್ಣವುಳ್ಳ ಇದು ಸುಮಾರು 85,000 ಪ್ಯಾಲೇಸ್ಟಿನಿಯನ್ ನಿರಾಶ್ರಿತರಿಗೆ ನೆಲೆಯಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ