ಬೆಂಗಳೂರು: ಜೂನ್ 7ರ ಬೆಳಿಗ್ಗೆ 6 ಗಂಟೆವರಗೆ ರಾಜ್ಯದಲ್ಲಿ ಜಾರಿಯಲ್ಲಿದ್ದ ಕೊರೊನಾ ಲಾಕ್ಡೌನ್ನ್ನು ಜೂನ್ 14ರ ಬೆಳಿಗ್ಗೆ 6 ಗಂಟೆವರೆಗೆ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿ ಉದ್ದೇಶಿಸಿದ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದ್ದರೂ, ಸೋಂಕಿನ ಸರಪಳಿ ಪೂರ್ತಿಯಾಗಿ ತುಂಡಾಗಿಲ್ಲ. ಹೀಗಾಗಿ ತಜ್ಞರ ಸಮಿತಿಯ ಸಲಹೆಯ ಮೇರೆಗೆ ಜಾರಿಯಲ್ಲಿರುವ ಕಠಿಣ ನಿರ್ಬಂಧಗಳನ್ನು ಒಂದು ವಾರಗಳ ಕಾಲ ಮುಂದೂಡಲಾಗಿದೆ, ಎಂದು ತಿಳಿಸಿದ್ದಾರೆ.
ಹೀಗಾಗಿ ಸದ್ಯ ಜಾರಿಯಲ್ಲಿ ಇರುವ ಮಾರ್ಗಸೂಚಿ ಒಂದು ವಾರಗಳ ಕಾಲ ಮುಂದುವರಿಯಲಿದೆ. ಜೂನ್ 14ವರೆಗೆ ಈಗಿನ ಮಾರ್ಗಸೂಚಿ ಮುಂದುವರಿಕೆಯಾಗಲಿದೆ.
ರಾಜ್ಯದ ಕೊರೊನಾ ಪಾಸಿಟಿವಿಟಿ ದರ ಶೇಕಡಾ ಐದಕ್ಕಿಂತ ಕಡಿಮೆಯಾದರೆ ಲಾಕ್ಡೌನ್ ತೆರವು ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದು, ಒಂದು ವಾರದ ನಂತರ ಲಾಕ್ಡೌನ್ ತೆರವುಗೊಳಿಸುವ ಬಗ್ಗೆ ಸುಳಿವು ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಸಚಿವ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ, ಸಚಿವರಾದ ವಿ. ಸೋಮಣ್ಣ, ಗೋಪಾಲಯ್ಯ, ಕೆ. ಸುಧಾಕರ್, ಎಸ್.ಟಿ. ಸೋಮಶೇಖರ್ ಉಪಸ್ಥಿತರಿದ್ದರು
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ