ನವದೆಹಲಿ,ಜೂ.7: ದೇಶದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡುವ ಕುರಿತು ಗೊಂದಲವನ್ನು ಬಗೆಹರಿಸಿರುವ ಪ್ರಧಾನಿ ನರೇಂದ್ರ ಮೋದಿ ಜೂ 21ರಿಂದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವುದಾಗಿ ಘೋಷಿಸಿದ್ದಾರೆ.
ಇಂದು ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರಸಕ್ತ ಶತಮಾನದ ಮಹಾಮಾರಿ ಕೋವಿಡ್-19 ವಿರುದ್ಧ ಹೋರಾಟಕ್ಕೆ ಲಸಿಕೀಕರಣವೇ ಮಹಾಮದ್ದು, ದೇಶಾದ್ಯಂತ ಶೇ. 100ರಷ್ಟು ಲಸಿಕೆ ಪೂರೈಕೆಗೆ ತ್ವರಿತಗತಿಯಲ್ಲಿ ಕೆಲಸ ನಿರ್ವಹಿಸಲಾಗುತ್ತಿದೆ ಎಂದು ಭರವಸೆ ನೀಡಿದರು.
ಕೇಂದ್ರ ಸರ್ಕಾರ ಲಸಿಕಾ ಕಂಪನಿಗಳಿಂದ ಲಸಿಕೆ ಖರೀದಿಸಿ ಎಲ್ಲಾ ರಾಜ್ಯಗಳಿಗೂ ಹಂಚಲಿದೆ. ಜೊತೆಗೆ, ಜೂ 21ರಿಂದ ಲಸಿಕೆ ನೀಡುವ ನಿಟ್ಟಿನಲ್ಲಿ ಶೀಘ್ರವೇ ಪ್ರತ್ಯೇಕ ಮಾರ್ಗಸೂಚಿ ಹೊರಬೀಳಲಿದೆ. ದೇಶಾದ್ಯಂತ ಉಚಿತ ಲಸಿಕೆ ನೀಡಲಾಗುವುದು.
ಸರ್ಕಾರಕ್ಕೆ ಹೊರೆಯಾಗಬಾರದು ಎಂದು ಭಾವಿಸುವ ಜನರು ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಬಹುದು. ಖಾಸಗಿ ಆಸ್ಪತ್ರೆಗೆ ಶೇಕಡ 25ರಷ್ಟು ಲಸಿಕೆ ಖರೀದಿಸಲು ಅವಕಾಶ ನೀಡಲಾಗುವುದು. ಇನ್ನು ಖಾಸಗಿ ಆಸ್ಪತ್ರೆಯವರು ಲಸಿಕೆ ಪಡೆಯುವವರಿಂದ 150 ರೂ. ಮಾತ್ರ ಪಡೆಯಬೇಕು ಎಂದರು.
ದೀಪಾವಳಿವರೆಗೆ ಉಚಿತ ಪಡಿತರ:
ಕಳೆದ ಏಪ್ರಿಲ್ನಲ್ಲಿ ಘೋಷಣೆಯಾದ ಲಾಕ್ ಡೌನ್ ಅವಧಿಯಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ, ಬಡಜನರಿಗೆ ಉಚಿತ ಪಡಿತರ ವಿತರಿಸುವ ಪ್ರಧಾನ ಮಂತ್ರಿ ಗರೀಬ್ ಅನ್ನ ಯೋಜನೆಯನ್ನು ದೀಪಾವಳಿವರೆಗೆ ಅಂದರೆ, ನವೆಂಬರ್ ತಿಂಗಳವರೆಗೆ ವಿಸ್ತರಿಸಲಾಗುವುದು. ಈ ಯೋಜನೆಯಡಿ ಬಡಜನರಿಗೆ ಪ್ರತಿ ತಿಂಗಳು ಉಚಿತ ಪಡಿತರ ದೊರೆಯಲಿದೆ ಎಂದರು. ಕಳೆದ ವರ್ಷ ಏಪ್ರಿಲ್, ಮೇ ತಿಂಗಳಿಗಾಗಿ ಆರಂಭಿಸಲಾಗಿದ್ದ ಈ ಯೋಜನೆಯನ್ನು ನಂತರ ವಿಸ್ತರಿಸಲಾಗಿತ್ತು. ಮಹಾಮಾರಿಯ ಸಮಯದಲ್ಲಿ ಸರ್ಕಾರ ಬಡವರ ಜೊತೆಗಿದೆ.ಯಾವುದೇ ಬಡ ಸಹೋದರರು ಹಸಿವಿನಿಂದ ಮಲಗಬಾರದು ಎಂಬುದು ಇದರ ಉದ್ದೇಶ ಎಂದು ಹೇಳಿದರು.
ಮಕ್ಕಳಿಗೂ ಲಸಿಕೆ ತಯಾರಿ:
ಕೋವಿಡ್-19 ಮೂರನೇ ಅಲೆಯಲ್ಲಿ ಮಕ್ಕಳಿಗೆ ಹಾನಿಯಾಗಲಿದೆ ಎಂಬ ತಜ್ಞರ ಹೇಳಿಕೆಯಿಂದ ಜನರು ಆತಂಕಪಡುವ ಅಗತ್ಯವಿಲ್ಲ. ಅದಕ್ಕಾಗಿಯೇ ಮಕ್ಕಳಿಗಾಗಿ ಲಸಿಕೆ ತಯಾರಿಸಲಾಗುತ್ತಿದ್ದು, ಪ್ರಯೋಗದ ಹಂತದಲ್ಲಿವೆ. ಒಂದು ನೇಸಲ್ ಲಸಿಕೆ ಕುರಿತು ಸಂಶೋಧನೆ ನಡೆಯುತ್ತಿದೆ. ಇದು ಮೂಗಿನಲ್ಲಿ ಸ್ಪ್ರೇ ಮಾಡಲಾಗುತ್ತದೆ. ಮುಂದಿನ ದಿನಗಳಲ್ಲಿ ಇದರಲ್ಲಿ ಸಫಲತೆ ದೊರೆತರೆ ಅದು ಲಸಿಕಾ ಅಭಿಯಾನಕ್ಕೆ ವೇಗ ನೀಡಲಿದೆ ಎಂದರು.ಇಷ್ಟು ಕಡಿಮೆ ಸಮಯದಲ್ಲಿ ಲಸಿಕೆ ತಯಾರಿಸುವುದು ಮಾನವತೆಗೆ ಒಂದು ದೊಡ್ಡ ಕೊಡುಗೆಯಾಗಿದೆ.ಅದಕ್ಕೆ ಅದರ ಮಿತಿ ಕೂಡ ಇದೆ.
ಲಸಿಕೆ ತಯಾರಿಸಿದ ನಂತರ ಕೂಡ ದೇಶದ ಅತ್ಯಂತ ಕಡಿಮೆ ದೇಶಗಳಲ್ಲಿ ಲಸಿಕೀಕರಣ ಆರಂಭವಾಗಿದೆ. ಡಬ್ಲ್ಯುಎಚ್ಒ ಈ ಸಂಬಂಧ ಮಾರ್ಗಸೂಚಿ ಕೂಡ ನೀಡಿದೆ. ಲಸಿಕೆಯ ಒಂದು ಡೋಸ್ ಕೂಡ ಎಷ್ಟು ಮಹತ್ವ ಎಂಬುದನ್ನು ನಾವು ಅರಿತಿದ್ದೇವೆ. ಪ್ರತಿ ಡೋಸ್ ನೊಂದಿಗೆ ಒಂದು ಜೀವ ಉಳಿಯಬಹುದು ಎಂದರು. ಇನ್ನು ಜನರಲ್ಲಿ ಗೊಂದಲ ತಪ್ಪಿಸುವ ಸಲುವಾಗಿ ರಾಜ್ಯಗಳಿಗೆ ಒಂದು ವಾರ ಮುಂಚೆಯೇ ಯಾವಾಗ ಎಷ್ಟು ಡೋಸ್ ದೊರೆಯಲಿದೆ ಎಂಬ ವಿವರ ನೀಡಲಾಗುತ್ತಿದೆ ಎಂದು ಹೇಳಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ