ನವದೆಹಲಿ:ನೆರೆ ರಾಷ್ಟ್ರಗಳಿಂದ ಮುಸ್ಲಿಮೇತರ ವಲಸಿಗರಿಂದ ಪೌರತ್ವಕ್ಕಾಗಿ ಅರ್ಜಿ ಆಹ್ವಾನಿಸಿ ಗೃಹ ಸಚಿವಾಲಯದಿಂದ ಹೊರಡಿಸಲಾಗಿರುವ ವಿವಾದಿತ ಅಧಿಸೂಚನೆಯ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನೀಸ್ ಅಹ್ಮದ್ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆ(ಪಿಐಎಲ್) ದಾಖಲಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ – 2019ರ ಅಧೀನದ ನಿಯಮಗಳನ್ನು ಇನ್ನೂ ರೂಪಿಸಲಾಗಿಲ್ಲ. ಈ ಮಧ್ಯೆ ಗೃಹ ಸಚಿವಾಲಯದ ಗೆಝೆಟೆಡ್ ಅಧಿಸೂಚನೆಯ ಮೂಲಕ ಮೇ 28ರಂದು ಗುಜರಾತ್, ರಾಜಸ್ತಾನ, ಛತ್ತೀಸ್ ಗಢ್, ಹರ್ಯಾಣ ಮತ್ತು ಪಂಜಾಬಿನ 13 ಜಿಲ್ಲೆಗಳಲ್ಲಿ ಪ್ರಸಕ್ತ ನೆಲೆಸಿರುವ ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಹಿಂದು, ಸಿಖ್, ಜೈನ ಕ್ರಿಶ್ಚಿಯನ್ ಮತ್ತು ಬೌದ್ಧರಿಂದ ಪೌರತ್ವಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗೃಹ ಸಚಿವಾಲಯದ ಈ ಅಧಿಸೂಚನೆಯು ಸಿಎಎಯನ್ನು ಹಿಂಬಾಗಿಲ ಮೂಲಕ ಅನುಷ್ಠಾನಗೊಳಿಸುವ ಒಂದು ಪ್ರಯತ್ನವಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆರೋಪಿಸಿದೆ.
ಇದು ಪೌರತ್ವ ಕಾಯ್ದೆ- 1955ರ ಸೆಕ್ಷನ್ 5 ಮತ್ತು 6 ಅಡಿಯಲ್ಲಿ ನೋಂದಾಯಿಸಿ ತಮ್ಮ ಧರ್ಮದ ಆಧಾರದ ಮೇಲೆ ಮುಸ್ಲಿಮರಿಗೆ ಪೌರತ್ವ ಪಡೆಯುವುದನ್ನು ತಡೆಯುತ್ತದೆ ಮತ್ತು ಇದು ಭಾರತೀಯ ಸಂವಿಧಾನದ ಅನುಚ್ಛೇಧ 14ನ್ನು ಉಲ್ಲಂಘಿಸುತ್ತದೆ. ಈ ನಿಟ್ಟಿನಲ್ಲಿ ಈ ಅಧಿಸೂಚನೆಯು ಅಸಾಂವಿಧಾನಿಕ, ತಾರತಮ್ಯದಿಂದ ಕೂಡಿದೆ ಎಂದು ಘೋಷಿಸಬೇಕೆಂದು ಅನೀಸ್ ಅಹ್ಮದ್ ಸುಪ್ರೀಂ ಕೋರ್ಟ್ ನಲ್ಲಿ ದಾಖಲಿಸಿರುವ ಪಿಐಎಲ್ ನಲ್ಲಿ ಮನವಿ ಮಾಡಿದ್ದಾರೆ. ಪೌರತ್ವ ಕಾಯ್ದೆ 1955ರ ಸೆಕ್ಷನ್ 5 ಮತ್ತು 6ರನ್ನು ಉಲ್ಲಂಘಿಸಿ ಹೊರಡಿಸಲಾಗಿರುವ ಈ ವಿವಾದಿತ ಗೆಝೆಟೆಡ್ ಅಧಿಸೂಚನೆಯನ್ನು ಪರಿಶೀಲಿಸಬೇಕೆಂದೂ ಅವರು ಪಿಐಎಲ್ ನಲ್ಲಿ ಕೋರಿದ್ದಾರೆ. ಜೊತೆಗೆ ಪೌರತ್ವ ಕಾಯ್ದೆ – 1955ರ ಸೆಕ್ಷನ್ 16ರ ಮರೆಯಲ್ಲಿ ಕೇಂದ್ರ ಸರಕಾರವು ನಡೆಸುತ್ತಿರುವ ‘ಆಡಳಿತದ ಕಪಟ ಪ್ರಯೋಗ’ವನ್ನು ತಡೆಯಬೇಕೆಂದೂ ಅವರು ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ