ಮಂಗಳೂರು: ಕೋವಿಡ್ ಸೋಕಿನ ಪ್ರಮಾಣ ಕಡಿಮೆಗೊಳಿಸುವ ಸಲುವಾಗಿ ದ.ಕ. ಜಿಲ್ಲೆಯ 17 ಗ್ರಾ.ಪಂಗಳನ್ನು ಜೂ.14 ರಿಂದ ಬೆಳಗ್ಗೆ 9 ಗಂಟೆಯಿಂದ 21ರ ಬೆಳಗ್ಗೆ 9 ಗಂಟೆಯವರೆಗೆ ಸೀಲ್ ಡೌನ್ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.
ದ.ಕ.ಜಿ.ಪಂ ಸಿಇಒ ಅವರ ವರದಿ ಆಧರಿಸಿ 50 ಕ್ಕಿಂತ ಅಧಿಕ ಕೋವಿಡ್ ಸಕ್ರಿಯ ಪ್ರಕರಣಗಳು ಇರುವ ಗ್ರಾಪಂಗಳನ್ನು ಸೀಲ್ ಡೌನ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ ಮಂಗಳೂರು ತಾಲೂಕಿನ ಕೊಣಾಜೆ ಮತ್ತು ನೀರುಮಾರ್ಗ, ಬೆಳ್ತಂಗಡಿ ತಾಲೂಕಿನ ನಾರಾವಿ, ಕೊಲ್ಲೂರು, ಮಿತ್ತಬಾಗಿಲು, ಮಾಲಾಡಿ, ನೆರಿಯ, ಲಾಯಿಲ, ಉಜಿರೆ ಮತ್ತು ಚಾರ್ಮಾಡಿ ಮುಂದಿನ ಒಂದು ವಾರಗಳ ಕಾಲ ಸೀಲ್ ಡೌನ್ ಆಗಲಿವೆ.
ಅದಲ್ಲದೆ ಸುಳ್ಯ ತಾಲೂಕಿನ ಐವರ್ನಾಡು, ಅಮರ ಮುಡೂರು, ಕೊಲ್ಲಮೊಗರು, ಗುತ್ತಿಗಾರು, ಅರಂತೋಡು, ಕಡಬ ತಾಲೂಕಿನ ಸುಬ್ರಮಣ್ಯ ಹಾಗೂ ಸವಣೂರು ಸಹಿತ 17 ಗ್ರಾಪಂಗಳು ಸೀಲ್ಡೌನ್ ಆಗಲಿದೆ. ಈ 17 ಗ್ರಾಪಂಗಳಿಗೆ ಹೊರಗಿನಿಂದ ಬರುವವರು ಮತ್ತು ಅಲ್ಲಿಂದ ಹೊರಗೆ ಹೋಗುವವರಿಗೆ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಅಲ್ಲದೆ ನರ್ಸಿಂಗ್ ಹೋಂ, ಕ್ಲಿನಿಕ್, ಲ್ಯಾಬ್, ಟಲಿಮೆಡಿಸಿನ್, ರಕ್ತ ಸಂಗ್ರಹ ಕೇಂದ್ರ ಇತ್ಯಾದಿ ತೆರೆಯಲು ಅವಕಾಶ ಕಲ್ಪಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ