ಮಂಗಳೂರು: ಕೋವಿಡ್ ಸೋಕಿನ ಪ್ರಮಾಣ ಕಡಿಮೆಗೊಳಿಸುವ ಸಲುವಾಗಿ ದ.ಕ. ಜಿಲ್ಲೆಯ 17 ಗ್ರಾ.ಪಂಗಳನ್ನು ಜೂ.14 ರಿಂದ ಬೆಳಗ್ಗೆ 9 ಗಂಟೆಯಿಂದ 21ರ ಬೆಳಗ್ಗೆ 9 ಗಂಟೆಯವರೆಗೆ ಸೀಲ್ ಡೌನ್ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.
ದ.ಕ.ಜಿ.ಪಂ ಸಿಇಒ ಅವರ ವರದಿ ಆಧರಿಸಿ 50 ಕ್ಕಿಂತ ಅಧಿಕ ಕೋವಿಡ್ ಸಕ್ರಿಯ ಪ್ರಕರಣಗಳು ಇರುವ ಗ್ರಾಪಂಗಳನ್ನು ಸೀಲ್ ಡೌನ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ ಮಂಗಳೂರು ತಾಲೂಕಿನ ಕೊಣಾಜೆ ಮತ್ತು ನೀರುಮಾರ್ಗ, ಬೆಳ್ತಂಗಡಿ ತಾಲೂಕಿನ ನಾರಾವಿ, ಕೊಲ್ಲೂರು, ಮಿತ್ತಬಾಗಿಲು, ಮಾಲಾಡಿ, ನೆರಿಯ, ಲಾಯಿಲ, ಉಜಿರೆ ಮತ್ತು ಚಾರ್ಮಾಡಿ ಮುಂದಿನ ಒಂದು ವಾರಗಳ ಕಾಲ ಸೀಲ್ ಡೌನ್ ಆಗಲಿವೆ.
ಅದಲ್ಲದೆ ಸುಳ್ಯ ತಾಲೂಕಿನ ಐವರ್ನಾಡು, ಅಮರ ಮುಡೂರು, ಕೊಲ್ಲಮೊಗರು, ಗುತ್ತಿಗಾರು, ಅರಂತೋಡು, ಕಡಬ ತಾಲೂಕಿನ ಸುಬ್ರಮಣ್ಯ ಹಾಗೂ ಸವಣೂರು ಸಹಿತ 17 ಗ್ರಾಪಂಗಳು ಸೀಲ್ಡೌನ್ ಆಗಲಿದೆ. ಈ 17 ಗ್ರಾಪಂಗಳಿಗೆ ಹೊರಗಿನಿಂದ ಬರುವವರು ಮತ್ತು ಅಲ್ಲಿಂದ ಹೊರಗೆ ಹೋಗುವವರಿಗೆ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಅಲ್ಲದೆ ನರ್ಸಿಂಗ್ ಹೋಂ, ಕ್ಲಿನಿಕ್, ಲ್ಯಾಬ್, ಟಲಿಮೆಡಿಸಿನ್, ರಕ್ತ ಸಂಗ್ರಹ ಕೇಂದ್ರ ಇತ್ಯಾದಿ ತೆರೆಯಲು ಅವಕಾಶ ಕಲ್ಪಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ