ಲಕ್ನೋ: ಕೇಂದ್ರ ಸರ್ಕಾರ ಕಳೆದ ವಾರ ರಚಿಸಿದ ರಾಮ ಮಂದಿರ ಟ್ರಸ್ಟ್ ಅಕ್ರಮ ಭೂ ಒಪ್ಪಂದ ಮಾಡಿಕೊಂಡಿದೆ ಎಂದು ಉತ್ತರ ಪ್ರದೇಶದ ವಿರೋಧ ಪಕ್ಷಗಳು ಆರೋಪಿಸಿವೆ. ಕಳೆದ ಮಾರ್ಚ್ನಲ್ಲಿ ಈ ವ್ಯವಹಾರ ನಡೆದಿದೆ ಎಂದು ಸಮಾಜವಾದಿ ಪಕ್ಷ ಹಾಗೂ ಆಮ್ ಆದಿ ಪಕ್ಷ ಆರೋಪಿಸಿವೆ.
ಇಬ್ಬರು ರಿಯಲ್ ಎಸ್ಟೇಟ್ ಡೀಲರ್ಗಳು ವ್ಯಕ್ತಿಯೊಬ್ಬರಿಂದ 2 ಕೋಟಿ ರೂಪಾಯಿಗೆ ಆಸ್ತಿಯೊಂದನ್ನು ಖರೀದಿಸಿ, ಕೆಲವೇ ನಿಮಿಷಗಳಲ್ಲಿ ಅದನ್ನು ಟ್ರಸ್ಟ್ಗೆ 18.5 ಕೋಟಿ ರೂಪಾಯಿಗೆ ಮಾರಾಟ ಮಾಡಿವೆ ಎಂದು ಆರೋಪಿಸಲಾಗಿದೆ. ಇದನ್ನು ಟ್ರಸ್ಟ್ ನಿರಾಕರಿಸಿದೆ.
ಸ್ಥಳೀಯ ಬಿಜೆಪಿ ನಾಯಕರು ಮತ್ತು ಟ್ರಸ್ಟಿನ ಕೆಲವು ಸದಸ್ಯರ ಸಮ್ಮತಿಯೊಂದಿಗೆ ಈ ಅಕ್ರಮ ಭೂ ಒಪ್ಪಂದ ನಡೆದಿದೆ ಎಂದು ಅಯೋಧ್ಯಾದಲ್ಲಿ ಸಮಾಜವಾದಿ ಪಕ್ಷದ ಮಾಜಿ ಶಾಸಕ ಪವನ್ ಪಾಂಡೆ ಭಾನುವಾರ ಆರೋಪಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ಅವರು ಪ್ರದರ್ಶಿಸಿದ್ದಾರೆ. ಈ ವ್ಯವಹಾರಕ್ಕೆ ಅಯೋಧ್ಯಾದ ಮೇಯರ್ ಹಾಗೂ ಟ್ರಸ್ಟ್ನ ಸ್ಥಳೀಯ ಸದಸ್ಯರೊಬ್ಬರು ಸಾಕ್ಷಿಗಳಾಗಿ ಸಹಿ ಹಾಕಿದ್ದರು ಎಂದು ತಿಳಿಸಿದ್ದಾರೆ.
ಕೋಟ್ಯಂತರ ಜನರು ರಾಮ ಮಂದಿರ ಟ್ರಸ್ಟ್ಗೆ ದೇಣಿಗೆಗಳನ್ನು ನೀಡಿದ್ದಾರೆ. ದೇಣಿಗೆಗಾಗಿ ತಮ್ಮ ಉಳಿತಾಯದ ಹಣವನ್ನು ನೀಡಿದ್ದಾರೆ. ಅವರ ಹಣವನ್ನು ಬಳಸಿಕೊಂಡು ಈ ರೀತಿ ಮಾಡುವುದಾದರೆ ಇದು ದೇಶದ 120 ಕೋಟಿ ಜನರಿಗೆ ಮಾಡುವ ಅವಮಾನ ಎಂದು ಅವರು ಆರೋಪಿಸಿದ್ದಾರೆ.
ಎಎಪಿಯಿಂದಲೂ ಆರೋಪ
ಪ್ರತ್ಯೇಕ ಸುದ್ದಿಗೋಷ್ಠಿಯಲ್ಲಿ ಎಎಪಿ ಮುಖಂಡ ಮತ್ತು ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಕೂಡ ಇದೇ ಆರೋಪ ಮಾಡಿದರು. ‘ಶ್ರೀರಾಮನ ಹೆಸರಿನಲ್ಲಿ ಭ್ರಷ್ಟಾಚಾರ ನಡೆಯಲಿದೆ ಎಂಬುದನ್ನು ಯಾರೂ ಊಹಿಸಿರಲಿಲ್ಲ. ಆದರೆ ಕೋಟ್ಯಂತರ ರೂಪಾಯಿ ವಂಚನೆ ನಡೆದಿದೆ ಎಂಬುದನ್ನು ಈ ದಾಖಲೆಗಳು ತೋರಿಸುತ್ತವೆ’ ಎಂದು ಅವರು ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ