ಮಂಗಳೂರು: ನಗರದಿಂದ ಬಜಪೆ ವಿಮಾನ ನಿಲ್ದಾಣ-ಕಟೀಲು ಸಂಪರ್ಕ ಕಲ್ಪಿಸುವ ಮರವೂರು ಸೇತುವೆಯಲ್ಲಿ ಬಿರುಕು ಕಂಡು ಬಂದಿದ್ದು, ಸಂಚಾರ ಸ್ಥಗಿತಗೊಳಿಸಲಾಗಿದೆ.
ಕರಾವಳಿ ಭಾಗದಲ್ಲಿ ಕಳೆದ ಮೂರು ನಾಲ್ಕು ದಿನದಿಂದ ಭಾರೀ ಮಳೆಯಾಗುತ್ತಿದೆ. ನದಿಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ಮರವೂರು ಸೇತುವೆಯ ಮೊದಲ ಅಂಕಣದ ( ಮೊದಲ ಪಿಲ್ಲರ್ ಬಳಿ) ಸುಮಾರು ಮೂರು ಅಡಿಗಳಷ್ಟು ಸೇತುವೆ ಕುಸಿದಿದೆ.

ಮಂಗಳೂರಿನಿಂದ ಬಜಪೆ ವಿಮಾನ ನಿಲ್ದಾಣ, ಕಟೀಲು ದೇವಸ್ಥಾನ, ಕಿನ್ನಿಗೋಳಿ ಮುಂತಾದ ಕಡೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಸೇತುವೆ ಇದಾಗಿದೆ. ಸೇತುವೆ ಬಿರುಕು ಬಿಟ್ಟ ಕಾರಣ ಈ ಪ್ರಮುಖ ಸಂಪರ್ಕ ಕೊಂಡಿ ತಪ್ಪಿದಂತಾಗಿದೆ.
ಮರವೂರು ಸೇತುವೆ ಬಿರುಕು ಹಿನ್ನೆಲೆಯಲ್ಲಿಕಾವೂರು -ಕೂಳೂರು- ಕೆ ಬಿ ಎಸ್- ಜೋಕಟ್ಟೆ- ಪೋರ್ಕೊಡಿ-ಬಜಪೆ ಅಥವಾ ಪಚ್ಚನಾಡಿ- ವಾಮಂಜೂರ್- ಗುರುಪುರ- ಕೈಕಂಬ- ಬಜಪೆ ಬದಲಿ ಸಂಪರ್ಕ ವ್ಯವಸ್ಥೆ ಮಾಡಲಾಗಿದೆ.
2018ರಲ್ಲಿ ಬಂಟ್ವಾಳ ತಾಲೂಕಿನ ಮೂಲರಪಟ್ನದ ಸೇತುವೆ ಕುಸಿದು ಬಿದ್ದಿತ್ತು. ಇದರಿಂದಾಗಿ ಇಲ್ಲಿನ ಸಂಚಾರ ವ್ಯವಸ್ಥೆಗೂ ತೊಡಕಾಗಿತ್ತು. ನೂತನ ಸೇತುವೆ ನಿರ್ಮಾಣದ ಕಾರ್ಯ ನಡೆಯುತ್ತಿದೆ. ಇದೀಗ ಜಿಲ್ಲೆಯ ಮತ್ತೊಂದು ಸೇತುವೆಯಲ್ಲಿ ಬಿರುಕು ಕಂಡುಬಂದಿದ್ದು, ಜಿಲ್ಲೆಯ ಸೇತುವೆಗಳ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ಆಗ್ರಹ ಕೇಳಿಬಂದಿದೆ.
ಏರ್ ಪೋರ್ಟ್ ದಾರಿ: ಮಂಗಳೂರಿನ ಕಾವೂರಿನಿಂದ ಏರ್ ಪೋರ್ಟ್ ಗೆ ತೆರಳುವ ರಸ್ತೆ ಸಂಪೂರ್ಣ ಬಂದ್ ಆಗಿದ್ದು, ವಿಮಾನ ನಿಲ್ದಾಣಕ್ಕೆ ಮಂಗಳೂರು ನಗರದಿಂದ ಬರುವವರು ನಂತೂರಿನಲ್ಲಿ ತಿರುವು ಪಡೆದು ಕುಲಶೇಖರ -ಗುರುಪುರ ರಸ್ತೆಯಾಗಿ ಎರ್ ಪೂರ್ಟ್ ಗೆ ತೆರಳಲು ಸೂಚನೆ ನೀಡಲಾಗಿದೆ. ಉಡುಪಿ ಕಡೆಯಿಂದ ಬರುವವರು ಮೂಲ್ಕಿಯಲ್ಲಿ ತಿರುವು ಪಡೆದು ಕಿನ್ನಿಗೋಳಿ-ಕಟೀಲು ರಸ್ತೆಯಾಗಿ ಏರ್ ಪೋರ್ಟ್ ತೆರಳಲು ಸೂಚನೆ ನೀಡಲಾಗಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ