ಬೆಳ್ತಂಗಡಿ, ಜೂ.16: ದಿನಂದಿಂದ ದಿನಕ್ಕೆ ಇಂಧನ ತೈಲ ಬೆಲೆಯೇರಿಕೆಯಾಗಿ ಇದೀಗ ಪೆಟ್ರೋಲ್ ಬೆಲೆ 100 ರೂ. ಗಡಿ ದಾಟಿರುವುದನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವತಿಯಿಂದ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ, ಕಲ್ಲೇರಿ, ಮದ್ದಡ್ಕ, ಕೊಕ್ಕಡ, ಕುಪ್ಪೆಟ್ಟಿ ಮುಂತಾದ ನಗರಗಳಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಸರಕಾರದ ವಿರುದ್ಧ ಪೆಟ್ರೋಲ್ ಬಂಕ್ ಗಳ ಎದುರು ವಾಹನಗಳಿಗೆ ಹಗ್ಗ ಕಟ್ಟಿ ಎಳೆದು, ಸೈಕಲ್ ತುಳಿದು, ಭಿತ್ತಿ ಪತ್ರ ಪ್ರದರ್ಶಿಸಿ, ಘೋಷಣೆ ಕೂಗಿ ವಿಭಿನ್ನ ಶೈಲಿಯಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ವಿವಿದ ಕಡೆ ಗಳಲ್ಲಿ ನಡೆದ ಈ ಪ್ರತಿಭಟನೆಗಳಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ಹನೀಫ್ ಪುಂಜಾಲಕಟ್ಟೆ, ನಿಸಾರ್ ಕುದ್ರಡ್ಕ, ಫೈಝಲ್ ಮುರುಗೋಳಿ,ರಿಯಾಜ್ ಕುವೆಟ್ಟು, ಎಸ್.ಡಿ.ಪಿ.ಐ. ಬೆಳ್ತಂಗಡಿ ವಿಧಾನಸಭಾ ಸಮಿತಿಯ ಉಪಾಧ್ಯಕ್ಷ ಶುಕೂರ್ ಕುಪ್ಪೆಟ್ಟಿ, ಸದಸ್ಯರಾದ ಅಶ್ಫಾಕ್ ಪುಂಜಾಲಕಟ್ಟೆ, ಸಾಲಿ ಮದ್ದಡ್ಕ, ಮಜೀದ್ ಪುಂಜಾಲಕಟ್ಟೆ, ನವಾಜ್ ಕುದ್ರಡ್ಕ,ಅಝೀಜ್, ಆಸೀಫ್ ಕೊಕ್ಕಡ ಮುಂತಾದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ