ದಮ್ಮಾಮ್: ಕೇರಳದ ಕೊಲ್ಲಂ ಜಿಲ್ಲೆಯ ಇತಿಕ್ಕರ ಮೂಲದ ಸನಲ್ (35) ದಮ್ಮಾಮ್ ನಲ್ಲಿ ಕೆಲಸ ಮಾಡುತ್ತಿದ್ದಾಗ ಸಹೋದ್ಯೋಗಿಯೊಂದಿಗಿನ ಘರ್ಷಣೆಯಲ್ಲಿ ಇರಿತಕ್ಕೊಳಗಾಗಿ ಮೃತಪಟ್ಟಿದ್ದಾರೆ. ಇದರಿಂದಾಗಿ ಸನಲ್ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿದೆ.
ಈ ಘಟನೆ ಅಲ್-ಹಸಾ ಜೆಬೆಲ್ ಶೋಬಾ ಬಳಿ ನಡೆದಿದೆ. ಸನಲ್ ಖಾಸಗಿ ಡೈರಿ ಕಂಪನಿಯ ಉದ್ಯೋಗಿ. ಅದೇ ಕಂಪನಿಯಲ್ಲಿ ಘಾನಾದ ಸಹೋದ್ಯೋಗಿಯೊಂದಿಗಿನ ವಿವಾದ ಅವರ ಕೊಲೆಗೆ ಕಾರಣವಾಯಿತು. ಪ್ರಕರಣದ ಆರೋಪಿ ಕೂಡ ತನ್ನ ಕತ್ತನ್ನು ಸೀಳಿಕೊಂಡು ಚಿಕಿತ್ಸೆ ಪಡೆಯುತ್ತಿದ್ದಾನೆ. ಸನಲ್ ಅವರ ಶವವನ್ನು ಹುಫೂಫ್ ಆಸ್ಪತ್ರೆಗೆ ಸಾಗಿಸಲಾಗಿದೆ.
ಸನಲ್ ಘಾನ ಮೂಲದ ವ್ಯಕ್ತಿಯನ್ನು ಕೆಲಸಕ್ಕೆ ಸೇರಿಸಿಕೊಂಡಿದ್ದ, ಇದೀಗ ಆತನ ಒಳ್ಳೆತನಕ್ಕೆ ಜೀವವನ್ನು ಕಳೆದುಕೊಳ್ಳುವಂತಾಗಿದೆ.
ಇಡುಕ್ಕಿಯ ಕರಣಪುರಂನ ವಿಷ್ಣು (29) ಎಂಬುವರನ್ನು ಶಾರ್ಜಾದ ಅಬು ಶಾಗರಾದಲ್ಲಿ ಆಫ್ರಿಕನ್ನರು ಥಳಿಸಿ ಕೊಲೆಮಾಡಿದ್ದಾರೆ. ಕ್ಷೌರಿಕನ ಅಂಗಡಿ ಉದ್ಯೋಗಿಯಾಗಿದ್ದ ವಿಷ್ಣು ತನ್ನ ನಿವಾಸದಲ್ಲಿರುವ ವೇಳೆ ಆಫ್ರಿಕನ್ನರ ಮಧ್ಯೆ ನಡೆದ ಘರ್ಷಣೆಯಲ್ಲಿ ಸಿಲುಕಿದ್ದಾರೆ ಎಂದು ಸಹೋದ್ಯೋಗಿಗಳು ಹೇಳುತ್ತಾರೆ.
ಮಂಗಳವಾರ ರಜಾದಿನವಾದ್ದರಿಂದ ಅವರು ಕೆಲಸಕ್ಕೆ ಹೋಗಿರಲಿಲ್ಲ. ಈ ಘಟನೆ ಮಧ್ಯಾಹ್ನ ನಿವಾಸದಲ್ಲಿ ನಡೆದಿದೆ. ಶವವನ್ನು ಶಾರ್ಜಾ ಶವಾಗಾರಕ್ಕೆ ವರ್ಗಾಯಿಸಲಾಗಿದ್ದು, ಘಟನೆ ಕುರಿತು ಶಾರ್ಜಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್