ದಮ್ಮಾಮ್: ಕೇರಳದ ಕೊಲ್ಲಂ ಜಿಲ್ಲೆಯ ಇತಿಕ್ಕರ ಮೂಲದ ಸನಲ್ (35) ದಮ್ಮಾಮ್ ನಲ್ಲಿ ಕೆಲಸ ಮಾಡುತ್ತಿದ್ದಾಗ ಸಹೋದ್ಯೋಗಿಯೊಂದಿಗಿನ ಘರ್ಷಣೆಯಲ್ಲಿ ಇರಿತಕ್ಕೊಳಗಾಗಿ ಮೃತಪಟ್ಟಿದ್ದಾರೆ. ಇದರಿಂದಾಗಿ ಸನಲ್ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿದೆ.
ಈ ಘಟನೆ ಅಲ್-ಹಸಾ ಜೆಬೆಲ್ ಶೋಬಾ ಬಳಿ ನಡೆದಿದೆ. ಸನಲ್ ಖಾಸಗಿ ಡೈರಿ ಕಂಪನಿಯ ಉದ್ಯೋಗಿ. ಅದೇ ಕಂಪನಿಯಲ್ಲಿ ಘಾನಾದ ಸಹೋದ್ಯೋಗಿಯೊಂದಿಗಿನ ವಿವಾದ ಅವರ ಕೊಲೆಗೆ ಕಾರಣವಾಯಿತು. ಪ್ರಕರಣದ ಆರೋಪಿ ಕೂಡ ತನ್ನ ಕತ್ತನ್ನು ಸೀಳಿಕೊಂಡು ಚಿಕಿತ್ಸೆ ಪಡೆಯುತ್ತಿದ್ದಾನೆ. ಸನಲ್ ಅವರ ಶವವನ್ನು ಹುಫೂಫ್ ಆಸ್ಪತ್ರೆಗೆ ಸಾಗಿಸಲಾಗಿದೆ.
ಸನಲ್ ಘಾನ ಮೂಲದ ವ್ಯಕ್ತಿಯನ್ನು ಕೆಲಸಕ್ಕೆ ಸೇರಿಸಿಕೊಂಡಿದ್ದ, ಇದೀಗ ಆತನ ಒಳ್ಳೆತನಕ್ಕೆ ಜೀವವನ್ನು ಕಳೆದುಕೊಳ್ಳುವಂತಾಗಿದೆ.
ಇಡುಕ್ಕಿಯ ಕರಣಪುರಂನ ವಿಷ್ಣು (29) ಎಂಬುವರನ್ನು ಶಾರ್ಜಾದ ಅಬು ಶಾಗರಾದಲ್ಲಿ ಆಫ್ರಿಕನ್ನರು ಥಳಿಸಿ ಕೊಲೆಮಾಡಿದ್ದಾರೆ. ಕ್ಷೌರಿಕನ ಅಂಗಡಿ ಉದ್ಯೋಗಿಯಾಗಿದ್ದ ವಿಷ್ಣು ತನ್ನ ನಿವಾಸದಲ್ಲಿರುವ ವೇಳೆ ಆಫ್ರಿಕನ್ನರ ಮಧ್ಯೆ ನಡೆದ ಘರ್ಷಣೆಯಲ್ಲಿ ಸಿಲುಕಿದ್ದಾರೆ ಎಂದು ಸಹೋದ್ಯೋಗಿಗಳು ಹೇಳುತ್ತಾರೆ.
ಮಂಗಳವಾರ ರಜಾದಿನವಾದ್ದರಿಂದ ಅವರು ಕೆಲಸಕ್ಕೆ ಹೋಗಿರಲಿಲ್ಲ. ಈ ಘಟನೆ ಮಧ್ಯಾಹ್ನ ನಿವಾಸದಲ್ಲಿ ನಡೆದಿದೆ. ಶವವನ್ನು ಶಾರ್ಜಾ ಶವಾಗಾರಕ್ಕೆ ವರ್ಗಾಯಿಸಲಾಗಿದ್ದು, ಘಟನೆ ಕುರಿತು ಶಾರ್ಜಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ