ಬೆಂಗಳೂರು: ಬಿಜೆಪಿ ಒಳಜಗಳದಿಂದಾಗಿ ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದುಬಿದ್ದಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶಿಸಿ ರಾಜ್ಯದ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಕುರಿತು ಸರಣಿ ಟ್ಟೀಟ್ ಮಾಡಿರುವ ಅವರು, ಕೊರೊನಾ ನಿಯಂತ್ರಣದ ಮೇಲುಸ್ತುವಾರಿ ನೋಡಿಕೊಳ್ಳಬೇಕಾಗಿರುವ ರಾಜ್ಯದ ಸಚಿವರು ತಮ್ಮ ಕಚೇರಿಗೆ ಹೋಗದೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಬೀಡುಬಿಟ್ಟಿದ್ದಾರೆ. ತಮ್ಮ ಸ್ವಂತ ಕ್ಷೇತ್ರದಲ್ಲಿ ಜನರ ನೋವು-ಕಷ್ಟಗಳಿಗೆ ಸ್ಪಂದಿಸಬೇಕಾಗಿರುವ ಶಾಸಕರು ಬೆಂಗಳೂರಿನ ಪಕ್ಷದ ಕಚೇರಿಗೆ ಸುತ್ತುಹಾಕುತ್ತಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಅರಾಜಕತೆಯ ಸ್ಥಿತಿ ನೆಲೆಯಾಗಿದೆ ಎಂದು ಟೀಕಿಸಿದ್ದಾರೆ.
ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕಿನ ನಿಯಂತ್ರಣದ ಬಗ್ಗೆ ನಿಗಾವಹಿಸುವವರೇ ಇಲ್ಲವಾಗಿದೆ. ಕೊರೊನಾ ಮೂರನೇ ಅಲೆ ನಿರೀಕ್ಷೆಗಿಂತಲೂ ಬೇಗನೇ ಬಂದು ಅಪ್ಪಳಿಸುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸುತ್ತಲೇ ಇದ್ದಾರೆ. ವ್ಯಾಕ್ಸಿನ್ ಪೂರೈಕೆಯಲ್ಲಿನ ಕೊರತೆ, ಡೋಸ್ ಅವಧಿಯ ಬಗೆಗಿನ ಗೊಂದಲ ಮತ್ತು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳ ನಡುವಿನ ತಿಕ್ಕಾಟಗಳಿಂದಾಗಿ ವ್ಯಾಕ್ಸಿನ್ ನೀಡುವ ಕೆಲಸವೂ ಕುಂಟುತ್ತಾ ಸಾಗಿದೆ ಎಂದು ವಿಪಕ್ಷ ನಾಯಕರು ಹೇಳಿದ್ದಾರೆ.
ಪರಸ್ಪರ ಕಚ್ಚಾಟದಲ್ಲಿ ತೊಡಗಿರುವ ರಾಜ್ಯದ ಬಿಜೆಪಿ ನಾಯಕರಿಗೆ ಕಿವಿ ಹಿಂಡಿ ಬುದ್ದಿ ಹೇಳಬೇಕಾದ ಬಿಜೆಪಿಯ ಹೈಕಮಾಂಡ್ ತಾನೇ ರಾಜ್ಯದ ನಾಯಕರನ್ನು ಪರಸ್ಪರ ಎತ್ತಿಕಟ್ಟಿ ಕಳ್ಳಾಟ ಆಡುತ್ತಿದೆ. ರಾಜ್ಯದ ಹಿತಾಸಕ್ತಿಗೆ ಮಾರಕವಾಗಿರುವ ಈ ಭಿನ್ನಮತವನ್ನು ನಿಯಂತ್ರಿಸಲಿಕ್ಕಾಗದ ನರೇಂದ್ರ ಮೋದಿಯವರು ತಾವೊಬ್ಬ ದುರ್ಬಲ ನಾಯಕನೆಂದು ತಾವೇ ಸಾಬೀತುಪಡಿಸಿಕೊಳ್ಳುತ್ತಿದ್ದಾರೆ. 56 ಇಂಚಿನ ಎದೆಯವನು ಎಂದು ಕೊಚ್ಚಿಕೊಳ್ಳುತ್ತಿರುವ ನರೇಂದ್ರ ಮೋದಿಯವರು ತನ್ನ ಎದೆ ಸುತ್ತಳತೆ ಎಷ್ಟಿದೆ ಎನ್ನುವುದನ್ನಾದರೂ ಸ್ಪಷ್ಟಪಡಿಸಲಿ ಎಂದು ಸವಾಲು ಹಾಕಿದ್ದಾರೆ.
ಮಳೆಗಾಲವಾಗಿರುವ ಕಾರಣ ಶೀತ-ಜ್ವರದ ಕಾಯಿಲೆಯೂ ಸಾಮಾನ್ಯವಾಗಿರುವ ಕಾರಣ ಕೊರೊನಾ ಸೋಂಕನ್ನು ನಿಖರವಾಗಿ ಪತ್ತೆಹಚ್ಚುವುದು ಕೂಡಾ ಸಮಸ್ಯೆಯಾಗಲಿದೆ. ಇನ್ನೊಂದೆಡೆ ಶಾಲಾ ಪರೀಕ್ಷೆ ಮತ್ತು ಬೋದನಾ ಶುಲ್ಕದ ಗೊಂದಲ ಇನ್ನೂ ಬಗೆಹರಿದಿಲ್ಲ. ಈ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ಸಚಿವರೆಲ್ಲರನ್ನೂ ವಿಶ್ವಾಸಕ್ಕೆ ಪಡೆದು ಒಗ್ಗಟ್ಟಿನಿಂದ ಇಂದಿನ ಆರೋಗ್ಯ ಸಂಬಂಧಿ ತುರ್ತುಪರಿಸ್ಥಿತಿಯನ್ನು ಎದುರಿಸಿ ರಾಜ್ಯದ ಜನತೆಯ ಹಿತಕಾಪಾಡಲು ಮುಂದಾಗಬೇಕಾಗಿತ್ತು. ಆದರೆ ಮುಖ್ಯಮಂತ್ರಿಗಳು, ಶಾಸಕರು-ಸಚಿವರು ಮತ್ತು ಪಕ್ಷದ ಹೈಕಮಾಂಡ್ ನಾಯಕರ ಕೈಕಾಲು ಹಿಡಿದು ತಮ್ಮ ಕುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ