ಮಲಪ್ಪುರಂ,ಜೂ.18:ಉತ್ತರಪ್ರದೇಶದ ಹತ್ರಾಸ್ ನಲ್ಲಿ ನಡೆದ ದಲಿತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವರದಿ ಮಾಡಲು ತೆರಳುತ್ತಿದ್ದ ವೇಳೆ, ಯುಎಪಿಎ ಕಾಯ್ದೆಯಡಿ ಬಂಧನಕ್ಕೆ ಒಳಗಾಗಿರುವ ಕೇರಳ ಮೂಲದ ಪತ್ರಕರ್ತ ಸಿದ್ದೀಖ್ ಕಾಪ್ಪನ್ ಅವರ ತಾಯಿ ಇಂದು ಮೃತರಾಗಿದ್ದಾರೆ. ಅವರು ದೀರ್ಘಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.
ಸಿದ್ದೀಖ್ ಕಾಪ್ಪನ್ ಅವರ ತಾಯಿ 90 ವರ್ಷದ ಖದೀಜಾ ಕುಟ್ಟಿ ಕೇರಳದ ಮಲ್ಲಪುರಂ ಜಿಲ್ಲೆಯ ಗ್ರಾಮವೊಂದರಲ್ಲಿ ಅವರ ಪತ್ನಿ ಮತ್ತು ಮಕ್ಕಳೊಂದಿಗೆ ವಾಸಿಸುತ್ತಿದ್ದರು. ಫೆಭ್ರವರಿಯಲ್ಲಿ ಸಿದ್ದೀಖ್ ಕಾಪ್ಪನ್ ಅವರಿಗೆ ತಮ್ಮ ಅನಾರೋಗ್ಯ ಪೀಡಿತ ತಾಯಿಯನ್ನು ನೋಡಲು 5 ದಿನಗಳ ಪೆರೋಲ್ ನೀಡಲಾಗಿತ್ತು.
ಕೇರಳ ಮೂಲದ ಪತ್ರಕರ್ತ ಸಿದ್ದೀಖ್ ಕಾಪ್ಪನ್ 2020 ರ ಅಕ್ಟೋಬರ್ನಲ್ಲಿ ಉತ್ತರ ಪ್ರದೇಶದಲ್ಲಿ ಬಂಧನಕ್ಕೆ ಒಳಗಾಗಿದ್ದರು.ಅವರನ್ನು ಪಿಎಫ್ಐ ಜೊತೆಗೆ ಸಂಪರ್ಕವಿದೆ ಎಂದು ಶಂಕಿಸಿ ಬಂಧಿಸಲಾಗಿತ್ತು. ಅವರೊಡನೆ ಇಬ್ಬರನ್ನು ಸೆರೆಮನೆಯಲ್ಲಿಡಲಾಗಿದೆ.
ಅವರ ವಿರುದ್ಧ ದಾಖಲಾದ, ‘ಶಾಂತಿ ಕದಡುವ ಭೀತಿ’ಯ ಆರೋಪದ ವಿಚಾರಣೆಯನ್ನು ಉತ್ತರ ಪ್ರದೇಶದ ಮಥುರಾದ ನ್ಯಾಯಾಲಯವು ಮಂಗಳವಾರ ಕೈಬಿಟ್ಟಿದೆ. ನಿಗದಿತ ಆರು ತಿಂಗಳೊಳಗೆ ಅವರ ವಿರುದ್ಧದ ವಿಚಾರಣೆಯನ್ನು ಪೂರ್ಣಗೊಳಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ಪ್ರತಿವಾದಿ ವಕೀಲರು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ