ವಿದ್ಯಾರ್ಥಿಗಳ ಮುಂದಿನ ಜೀವನದ ದಾರಿಗಳ ಕುರಿತು ಮಾಹಿತಿಯನ್ನು ಒದಗಿಸುವ ಸಲುವಾಗಿ ಎಸ್ಎಸ್ಎಫ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ನಾಳೆ (20-06-2021) ಬೆಳಗ್ಗೆ 10 ಗಂಟೆಗೆ ಮಾಹಿತಿ ಕಾರ್ಯಾಗಾರ ಕಾರ್ಯಕ್ರಮವನ್ನು ಆನ್ಲೈನ್ (ZOOM) ಮೂಲಕ ನಡೆಸಲಾಗುತ್ತಿದೆ.
ಎಸ್ಎಸ್ಎಫ್ ಜಿಲ್ಲಾಧ್ಯಕ್ಷರಾದ ಶಾಫಿ ಸಅದಿ ಸೋಮವಾರಪೇಟೆ ರವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಕುವೆಂಪು ಯೂನಿವರ್ಸಿಟಿಯ ಅಸಿಸ್ಟೆಂಟ್ ಪ್ರೊಫೆಸರ್ ಆದ ಶಾಕಿರ್ರವರು ತರಗತಿ ನಡೆಸಲಿದ್ದಾರೆ.
ಎಸ್ ಎಸ್ ಎಫ್ ಕರ್ನಾಟಕ ರಾಜ್ಯ ಸಮಿತಿಯ ಕ್ಯಾಂಪಸ್ ಕಾರ್ಯದರ್ಶಿ ಶರೀಫ್ ಹೊಸತೋಟ ಉದ್ಘಾಟನೆ ನಿರ್ವಹಿಸುವ ಈ ಕಾರ್ಯಕ್ರಮದಲ್ಲಿ ಪ್ರಮುಖ ವ್ಯಕ್ತಿಗಳು ಭಾಗವಹಿಸಲಿದ್ದಾರೆ.
ಎಸ್ಎಸ್ಎಲ್ಸಿ, ಪಿಯುಸಿ, ಡಿಗ್ರಿ ವಿದ್ಯಾರ್ಥಿಗಳಿಗೆ ನಡೆಸಲ್ಪಡುವ ಈ ಕಾರ್ಯಕ್ರಮದಲ್ಲಿ ಎಲ್ಲಾ ಧರ್ಮದ ವಿದ್ಯಾರ್ಥಿಗಳು
ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳಬಹುದೆಂದು ಎಸ್ಎಸ್ಎಫ್ ಕೊಡಗು ಜಿಲ್ಲಾ ಸಮಿತಿಯ ವಿಸ್ಡಮ್ ಕಾರ್ಯದರ್ಶಿ ಝಕರಿಯ ಕೊಂಡಂಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಸೇರಬಯಸುವವರು ಕೆಳಗೆ ನೀಡಿರುವ ವಾಟ್ಸಪ್ ಸಂಖ್ಯೆಯಲ್ಲಿ ಮೆಸೇಜ್ ಮಾಡಿ ZOOMನ ಲಿಂಕನ್ನು ಪಡೆದುಕೊಳ್ಳಬಹುದು.
ಝಕರಿಯ
+91 99023 07541
ಮುಜೀಬ್
+91 94809 06066
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ