ಮಂಗಳೂರು,ಜೂ.21: ರಾಜ್ಯ ಸರಕಾರ ಶೇ.5ಕ್ಕಿಂತ ಕಡಿಮೆ ಕೋವಿಡ್ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಜೂ.21ರಿಂದ ಶೇ.50ರಷ್ಟು ಸಾರಿಗೆ ಸಹಿತ ಸಂಪೂರ್ಣ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದೆ. ಆದರೆ ಶೇ.5ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಕಾರಣಕ್ಕೆ ದ.ಕ ಜಿಲ್ಲೆಯನ್ನು ಆ ಪಟ್ಟಿಯಿಂದ ಕೈಬಿಟ್ಟಿದೆ.
ಇದೀಗ ದಕ್ಷಿಣ ಕನ್ನಡ ಜಿಲ್ಲೆಯನ್ನೂ ಅನ್ಲಾಕ್ ಮಾಡುವಂತೆ ಸಾರ್ವಜನಿಕರಿಂದ ಒತ್ತಾಯ ಕೇಳಿ ಬಂದಿದೆ. ಮಾತ್ರವಲ್ಲ, ಇಂದು ಬೆಳಿಗ್ಗೆ ಜಿಲ್ಲಾಡಳಿತ ಕಚೇರಿ ಮುಂದೆ ದಿಢೀರ್ ಪ್ರತಿಭಟನೆ ನಡೆಸಿದ ನೂರಾರು ಸಂಖ್ಯೆಯಲ್ಲಿದ್ದ ಜವಳಿ ಹಾಗೂ ಚಪ್ಪಲಿ ಅಂಗಡಿ ಮಾಲಕರು ಅಂಗಡಿ ತೆರೆಯಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.ವರ್ತಕರು, ಕೆಲಸಗಾರರು ಕಳೆದ 2 ತಿಂಗಳಿನಿಂದ ಕೆಲಸವಿಲ್ಲದೆ ದಿನದೂಡುತ್ತಿದ್ದಾರೆ. ಲಾಕ್ ಡೌನ್ ಪರಿಣಾಮ, ಜನ ಸಂಕಷ್ಟಗೊಳಗಾಗುತ್ತಿದ್ದಾರೆ. ತಮಗೆ ವ್ಯಾಪಾರ ಮಾಡಲು ಅವಕಾಶ ಕೋರಿ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪೂರ್ಣ ಲಾಕ್ ಡೌನ್ ಸಡಿಲಿಕೆಯ ಭಾಗ್ಯ ದೊರೆತರೆ, ಮಂಗಳೂರಿಗೆ ಮಾತ್ರ ಹಾಫ್ ಲಾಕ್ ಡೌನ್ ಹೇರಲಾಗಿದೆ. ಕಳೆದ ಎರಡು ತಿಂಗಳಿನಿಂದ ಜನರು ಕೆಲಸವಿಲ್ಲದೆ, ಜಿಲ್ಲಾಡಳಿತದ ಮೇಲೆ ಹಿಡಿಶಾಪ ಹಾಕುತ್ತಿದ್ದಾರೆ.
ನಿನ್ನೆಯಷ್ಟೇ (ಜೂ.20) ಜಿಲ್ಲಾಧಿಕಾರಿ ಜುಲೈ 5 ರವರೆಗೆ ಹಾಫ್ ಲಾಕ್ ಡೌನ್ ಘೋಷಿಸಿ, ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 1 ಗಂಟೆಯವರೆಗೆ ಅವಕಾಶ ನೀಡಿ ಆದೇಶ ಹೊರಡಿಸಿದ್ದರು.
ಶೀಘ್ರದಲ್ಲೇ ಲಾಕ್ ಡೌನ್ ಪೂರ್ಣ ಸಡಿಲಿಕೆ- ಉಸ್ತುವಾರಿ ಸಚಿವರ ಭರವಸೆ
ಇತ್ತ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ವಾರದ ಬಳಿಕ ಜಿಲ್ಲೆಯಲ್ಲಿ ಪೂರ್ಣ ಲಾಕ್ ಡೌನ್ ಸಡಿಲಿಕೆಗೆ ಚಿಂತನೆ ನಡೆಸಲಾಗುವುದು ಎಂದಿದ್ದಾರೆ.ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ 7.5 ರಿಂದ 5.5 ಕ್ಕೆ ಕುಸಿದಿದೆ. ಮೂರು ನಾಲ್ಕು ದಿನಗಳಲ್ಲಿ ಜನತೆ ಕಟ್ಟುನಿಟ್ಟಿನ ಲಾಕ್ ಡೌನ್ ಕೈಗೊಂಡರೆ ಶೇ 3 ರಿಂದ 4 ಕ್ಕೆ ಪಾಸಿಟಿವಿಟಿ ದರ ಇಳಿಯಬಹುದು. ಆವಾಗ ಪೂರ್ಣ ಲಾಕ್ ಡೌನ್ ಸಡಿಲಿಕೆಗೆ ಕ್ರಮ ಕೈಗೊಳ್ಳಬಹುದು ಎಂದಿದ್ದಾರೆ.ಜಿಲ್ಲೆಯಲ್ಲಿ ಬಸ್ ಸಂಚಾರ ಆರಂಭಿಸುವಂತೆ ಜನಸಾಮಾನ್ಯರು ಒತ್ತಾಯಿಸುತ್ತಿದ್ದು ವಾರದ ಬಳಿಕ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಜವಳಿ ಮಳಿಗೆ ವರ್ತಕರು ಅಂಗಡಿ ತೆರೆಯಲು ಅವಕಾಶ ನೀಡುವಂತೆ ಮನವಿ ಮಾಡಿದ್ದು, ಈ ಬಗ್ಗೆ ಎರಡು ಮೂರು ದಿನಗಳಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಉಸ್ತುವಾರಿ ಮಂತ್ರಿ ಕೋಟಾ ಶ್ರೀನಿವಾಸ್ ಪೂಜಾರಿ ಮಾಹಿತಿ ನೀಡಿದ್ದಾರೆ. ವಾರದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೂರ್ಣ ಲಾಕ್ ಡೌನ್ ಸಡಿಲಿಕೆಗೆ ಗಂಭೀರ ಚಿಂತನೆ ನಡೆಯುತ್ತಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ